Webdunia - Bharat's app for daily news and videos

Install App

ಮೇಜರ್ ಸೇರಿದಂತೆ ನಾಲ್ಕು ಯೋಧರು ಹುತಾತ್ಮ

Webdunia
ಬುಧವಾರ, 15 ಫೆಬ್ರವರಿ 2017 (08:28 IST)
ಕಣಿವೆನಾಡಿನಲ್ಲಿ ಮಂಗಳವಾರ ನಡೆದ ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ನಾಲ್ವರು ಉಗ್ರರು ಬಲಿಯಾಗಿದ್ದು ಮೇಜರ್ ಸೇರಿದಂತೆ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಇತರ 8 ಯೋಧರು ಮತ್ತು ಒಬ್ಬ ನಾಗರಿಕ ಗಾಯಗೊಂಡಿದ್ದಾನೆ.

ಕುಪ್ವಾರಾ ಜಿಲ್ಲೆಯ ಕ್ರಾಲ್‌ಗುಂದ್ ಪ್ರದೇಶದಲ್ಲಿ ಮಂಗಳವಾರ ಸಂಜೆ ನಡೆದ ಎನ್‌ಕೌಂಟರ್‌ನಲ್ಲಿ ಮನೆಯೊಂದರಲ್ಲಿ ಅಡಗಿದ್ದ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ. ಗುಂಡಿನ ಚಕಮಕಿ ವೇಳೆ ಗಾಯಗೊಂಡಿದ್ದ ಮೇಜರ್ ಎಸ್. ದಹಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. 
 
ಅದಕ್ಕೂ ಮುನ್ನ ಮುಂಜಾನೆ ಜಮ್ಮು ಬಂಡಿಪೋರ್  ಜಿಲ್ಲೆಯ ಹಾಜಿನ್ ಪ್ರದೇಶದಲ್ಲಿ ನಡೆದ  ಗುಂಡಿನ ಚಕಮಕಿಯಲ್ಲಿ ಲಷ್ಕರ್‌ ಎ ತಯಬಾ (ಎಲ್‌ಇಟಿ) ಸಂಘಟನೆಯ ಪ್ರಮುಖ ಕಮಾಂಡರ್‌ ಮತ್ತು ಮೂವರು ಯೋಧರು ಬಲಿಯಾಗಿದ್ದಾರೆ. 
 
ಮೃತ ಉಗ್ರನನ್ನು ಪಾಕಿಸ್ತಾನದ ಪ್ರಜೆ ಅಬು ಹ್ಯಾರಿಸ್‌ ಎಂದು ಗುರುತಿಸಲಾಗಿದೆ. ಈತ ಎಲ್‌ಇಟಿಯ ಪ್ರಮುಖ ಕಮಾಂಡರ್‌ಗಳಲ್ಲೊಬ್ಬ ಎನ್ನಲಾಗುತ್ತಿದೆ. ಮತ್ತೆ ಮೂವರು ಉಗ್ರರು ಸ್ಥಳದಿಂದ ಪರಾರಿಯಾಗಲು ಯಶಸ್ವಿಯಾಗಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments