ಮೇಘಸ್ಫೋಟ, ಭೂಕುಸಿತಕ್ಕೆ ಬೆಚ್ಚಿದ ಕಾಶ್ಮೀರ: ಒಂದೇ ಕುಟುಂಬದ ಏಳು ಮಂದಿ ಬಲಿ

Sampriya
ಶನಿವಾರ, 30 ಆಗಸ್ಟ್ 2025 (14:34 IST)
Photo Credit X
ಶ್ರೀನಗರ: ಜಮ್ಮು- ಕಾಶ್ಮೀರದಲ್ಲಿ ಮೇಘಸ್ಫೋಟ ಮುಂದುವರಿದಿದೆ. ರಂಬನ್ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಸಾವು–ನೋವು ಸಂಭವಿಸಿದೆ.

ಮೇಘಸ್ಫೋಟದಲ್ಲಿ ಮೂವರು ಮೃತಪಟ್ಟು ಇಬ್ಬರು ಕಣ್ಮರೆಯಾಗಿದ್ದಾರೆ. ಮತ್ತೊಂದು ಘಟನೆಯಲ್ಲಿ ರಿಯಾಸಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಭೂಕುಸಿತ ಸಂಭವಿಸಿ ಒಂದೇ ಕುಟುಂಬದ ಏಳು ಜನರು ಮೃತಪಟ್ಟಿದ್ದಾರೆ.

ರಂಬನ್ ಜಿಲ್ಲೆಯ ರಾಜ್‌ಗಢ ತಹಸಿಲ್‌ನಲ್ಲಿ ಮುಂಜಾನೆ ಸಂಭವಿಸಿದ ಮೇಘಸ್ಫೋಟದಿಂದ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿದೆ . ಇದರಿಂದಾಗಿ ಹಲವಾರು ಮನೆಗಳು ಧರಾಶಾಯಿಯಾಗಿದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಇಬ್ಬರನ್ನು ರಕ್ಷಿಸಲು ಎಸ್ ಡಿಆರ್ ಎಫ್, ಪೊಲೀಸ್, ಸ್ಥಳೀಯ ನಾಗರಿಕ ಸರ್ಕಾರಿ ಸಂಸ್ಥೆಗಳು ಮತ್ತು ನಿವಾಸಿಗಳ ತಂಡಗಳು ಒಟ್ಟಾಗಿ ಕೆಲಸ ಮಾಡುತ್ತಿವೆ.

ರಿಯಾಸಿ ಜಿಲ್ಲೆಯ ಮಹೋರ್ ಪ್ರದೇಶದ ಬದರ್ ಗ್ರಾಮದಲ್ಲಿ ಭಾರೀ ಮಳೆಯಿಂದ ಭಾರೀ ಭೂಕುಸಿತ ಉಂಟಾಗಿದೆ. ಭೂಕುಸಿತದಿಂದ ಒಂದು ಮನೆ ನೆಲಸಮವಾಗಿದ್ದು, ದಂಪತಿ ಮತ್ತು ಅವರ ಐವರು ಮಕ್ಕಳು ಸೇರಿದಂತೆ ಒಳಗೆ ಇದ್ದ ಏಳು ಜನರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ.

ಕಳೆದ ಹದಿನೈದು ದಿನಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಹಲವಾರು ಮೇಘಸ್ಫೋಟ ಘಟನೆಗಳು ಸಂಭವಿಸಿದ್ದು, ಸಾಕಷ್ಟು ಜೀವ ಹಾನಿಯಾಗಿದೆ. ಆಗಸ್ಟ್ 14 ರಂದು, ಮಾತಾ ಮಚೈಲ್ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ, ಪರ್ವತಮಯ ಕಿಶ್ತ್ವಾರ್ ಜಿಲ್ಲೆಯ ದೂರದ ಚೆಸೋಟಿ ಗ್ರಾಮದಲ್ಲಿ ಮೇಘಸ್ಫೋಟದಿಂದ ಭೂಕುಸಿತ ಮತ್ತು ಹಠಾತ್ ಪ್ರವಾಹ ಉಂಟಾಗಿ 68 ಜನರು ಮೃತಪಟ್ಟಿದ್ದರು. 

ಆಗಸ್ಟ್ 26 ರಂದು, ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭಾರಿ ಮೇಘಸ್ಫೋಟದಿಂದ ಉಂಟಾದ ಭೂಕುಸಿತದಿಂದ 34 ಜನರು ಮೃತಪಟ್ಟಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನ್ನ ಅಕ್ಕನನ್ನು ಮಾರಾಟ ಮಾಡ್ಬೇಡಿ, ಅಕ್ಕನ ಮಾತು ಕೇಳಿದ್ರೆ ಕಣ್ಣೀರು ಬರುತ್ತೆ

ವಿಧಾನಸಭೆ ಚುನಾವಣೆ, ಬಿಹಾರದಲ್ಲಿ ರಾಹುಲ್ ಗಾಂಧಿ ಮೊದಲ ರ್ಯಾಲಿ

ದ್ವೇಷ ಭಾಷಣ ಮಾಡುವವರ ಬಗ್ಗೆ ಮಂಗಳೂರಿನಲ್ಲಿ ಗುಡುಗಿದ ಸಿದ್ದರಾಮಯ್ಯ

ಮಹತ್ವದ ಪೋಸ್ಟ್ ಹಂಚಿಕೊಂಡ ಶ್ರೀರಾಮ ಜನ್ಮಭೂಮಿ ಟ್ರಸ್ಟ್‌

ತನ್ನವರನ್ನು ಕಳೆದುಕೊಂಡ ಸಂತ್ರಸ್ತರ ಕುಟುಂಬದ ಜತೆ ವಿಜಯ್ ನಡೆ ಹೇಗಿತ್ತು ಗೊತ್ತಾ

ಮುಂದಿನ ಸುದ್ದಿ
Show comments