Webdunia - Bharat's app for daily news and videos

Install App

ಕಾಶ್ಮೀರ ಹಿಂಸಾಚಾರ: ಸಾವಿನ ಸಂಖ್ಯೆ 23ಕ್ಕೆ ಏರಿಕೆ

Webdunia
ಸೋಮವಾರ, 11 ಜುಲೈ 2016 (12:57 IST)
ಭಯೋತ್ಪಾದಕ ಸಂಘಟನೆ ಹಿಜ್ಬುಲ್ ಮುಜಾಹಿದ್ದೀನ್ ಕಮಾಂಡ್ ಬುರ್ಹಾನ್ ವಾನಿ ಹತ್ಯೆಯ ಬಳಿಕ ಕಣಿವೆ ನಾಡು ಕಾಶ್ಮೀರದಲ್ಲಿ ಭುಗಿಲೆದ್ದಿರುವ ಹಿಂಸಾಚಾರ ಮೂರನೇ ದಿನಕ್ಕೆ ಕಾಲಿರಿಸಿದ್ದು ಸಾವಿನ ಸಂಖ್ಯೆ 23ಕ್ಕೇರಿದೆ. ಅನೇಕ ಪ್ರದೇಶಗಳಲ್ಲಿ ಹೇರಿರುವ ಕರ್ಫ್ಯೂವನ್ನು ಮುಂದುವರೆಸಲಾಗಿದೆ. 

ಪ್ರತಿಭಟನಾ ನಿರತರು ಮತ್ತು ಭದ್ರತಾ ಪಡೆಗಳ ನಡುವಿನ ಸಂಘರ್ಷದಲ್ಲಿ ಇಲ್ಲಿಯವರೆಗೆ ಒಟ್ಟು 23 ಜನರು ಸಾವನ್ನಪ್ಪಿದ್ದಾರೆ ಅದರಲ್ಲಿ ಒಬ್ಬರು ಪೊಲೀಸ್ ಪೇದೆಯಾಗಿದ್ದಾರೆ. 250ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಎಂದು ಸೈನ್ಯದ ಮೂಲಗಳು ತಿಳಿಸಿವೆ.
 
ನಿನ್ನೆ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದಲ್ಲಿ ಮೃತ ಪಟ್ಟವರನ್ನು ಫಿರೋಜ್ ಅಹಮದ್(22) ಮತ್ತು ಖುರ್ಷಿದ್ ಅಹಮದ್ ಮಿರ್(38) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. 
 
ದಕ್ಷಿಣ ಕಾಶ್ಮೀರದ ನಾಲ್ಕು ಜಿಲ್ಲೆಗಳಲ್ಲಿ ಶುಕ್ರವಾರ ಸಂಜೆಯಿಂದ ಮೊಬೈಲ್ ಸಂಪರ್ಕವನ್ನು ತಡೆ ಹಿಡಿಯಲಾಗಿದೆ. 
 
ಪರಿಸ್ಥಿತಿ ಇಷ್ಟರ ಮಟ್ಟಿಗೆ ಹದಗೆಟ್ಟಿರುವ ಹಿನ್ನೆಲೆಯಲ್ಲಿ  ಕಾಶ್ಮೀರದಲ್ಲಿನ ಪವಿತ್ರ ಹಿಂದೂ ಪವಿತ್ರ ದೇವಾಲಯ ಅಮರನಾಥ ಯಾತ್ರೆಗೆ ತೆರಳಿದ್ದ ಕರ್ನಾಟಕದ ಸಾವಿರಾರು ಜನ ಭಕ್ತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
 
ಸುರಕ್ಷಿತತೆ ದೃಷ್ಟಿಯಿಂದ ಅಮರನಾಥ್ ಯಾತ್ರೆಯನ್ನು ರದ್ದುಗೊಳಿಸಲಾಗಿದ್ದು ರಾಜ್ಯದ 5 ಸಾವಿರಕ್ಕೂ ಹೆಚ್ಚು ಜನರು ಮರಳಿ ರಾಜ್ಯಕ್ಕೆ ಬರಲು ಪರದಾಡುತ್ತಿದ್ದಾರೆ. ಸಂಕಷ್ಟಕ್ಕೆ ಸಿಲುಕಿರುವವರಲ್ಲಿ ಹುನಗುಂದದ ತಹಶೀಲ್ದಾರ್ ಸುಭಾಷ್ ಸಂಪಗಾವಿ ಕೂಡ ಇದ್ದು ಕಳೆದೆರಡು ದಿನಗಳಿಂದ ಟೂರಿಸ್ಟ್ ಬಸ್‌ಲ್ಲೇ ಇದ್ದೇವೆ. ಬಸ್ ಬಿಟ್ಟು ಎಲ್ಲಿಯೂ ಹೊರ ಹೋಗದಂತೆ ಸೇನೆ ಸೂಚನೆ ನೀಡಿದೆ. ಎಲ್ಲರೂ ಸೇಫ್ ಆಗಿದ್ದೇವೆ. ಆದರೆ ಕುಡಿಯುವ ನೀರು ಮತ್ತು  ಊಟಕ್ಕಾಗಿ ಪರದಾಟ ನಡೆಸುತ್ತಿದ್ದೇವೆ ಎಂದು ಮಾಧ್ಯಮದ ಬಳಿ ಕಷ್ಟ ತೋಡಿಕೊಂಡಿದ್ದಾರೆ. 
 
ಶ್ರೀನಗರದ ಪಠಾಣ್‌ಚೌಕದಲ್ಲಿ ಕರ್ನಾಟಕದ 5,000ಕ್ಕಿಂತ ಹೆಚ್ಚು ಪ್ರವಾಸಿಗರು ಸಿಕ್ಕಿ ಹಾಕಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. 
 
ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್ ದಾಳಿಗೆ ಗಟ್ಟಿಯಾಗಿ ನಿಲ್ಲುವಂತೆ ಇರಾನ್ ನಾಯಕ ಖಮೇನಿ ಜನತೆಗೆ ಸಂದೇಶ

ಇರಾನ್ ಬೆನ್ನಲ್ಲೇ ಇಸ್ರೇಲ್‌ನಿಂದ ಭಾರತೀಯರನ್ನು ಕರೆತರಲು ಮುಂದಾದ ಕೇಂದ್ರ ಸರ್ಕಾರ

ರಾಹುಲ್ ಗಾಂಧಿ ಜನ್ಮದಿನಕ್ಕೆ ಡಿಕೆಶಿಯಿಂದ ಕಣ್ಣುಗಳೇ ಗಿಫ್ಟ್

Sonia Gandhi: ಹಿರಿಯ ನಾಯಕಿ ಆಸ್ಪತ್ರೆಯಿಂದ ಡಿಸ್ಚಾರ್ಜ್‌

Air India Plane Crash: ತಾಯ್ನಾಡಿಗೆ ತಲುಪಿದ ಸಿಬ್ಬಂದಿ ಲಾಮ್‌ನುಂಥೆಮ್‌ ಮೃತದೇಹ

ಮುಂದಿನ ಸುದ್ದಿ
Show comments