Webdunia - Bharat's app for daily news and videos

Install App

ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟುವುದೇ ಮೋದಿ ಕಾಯಕ: ರಾಹುಲ್ ಗಾಂಧಿ

Webdunia
ಶುಕ್ರವಾರ, 16 ಸೆಪ್ಟಂಬರ್ 2016 (13:17 IST)
ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ಕಾಶ್ಮಿರ ಶಾಂತಿಯುತವಾಗಿತ್ತು ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದಾರೆ.
 
ಪ್ರಧಾನಮಂತ್ರಿ ನರೇಂದ್ರ ಮೋದಿ ಒಬ್ಬರ ವಿರುದ್ಧ ಮತ್ತೊಬ್ಬರನ್ನು ಎತ್ತಿಕಟ್ಟುವುದು ಹೇಗೆ ಎನ್ನುವುದು ಚೆನ್ನಾಗಿ ಗೊತ್ತಿರುವುದರಿಂದ ದೇಶದ ಅಭಿವೃದ್ಧಿಗೆ ಮಾರಕವಾಗಿದೆ. ಇಂತಹ ರಾಜಕೀಯದಿಂದಲೇ ಕಾಶ್ಮಿರ ಹೊತ್ತಿ ಉರಿಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.
 
ಪ್ರಧಾನಿ ಮೋದಿ ಕಾಶ್ಮಿರದಲ್ಲೂ ಇಂತಹ ನೀತಿ ಅನುಸರಿಸುತ್ತಿದ್ದಾರೆ. ಶಾಂತಿಯುತವಾಗಿದ್ದ ಕಾಶ್ಮಿರ ಎರಡು ತಿಂಗಳ ನಂತರವೂ ಶಾಂತಗೊಳ್ಳುವ ಸೂಚನೆ ಕಂಡುಬರುತ್ತಿಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ದಾರೆ.
 
ಹರಿಯಾಣಾದಲ್ಲಿ ಜಾಟ್ ಸಮುದಾಯದ ವಿರುದ್ಧ ಜಾಟ್‌ರಹಿತ ಸಮುದಾಯದವರನ್ನು ಎತ್ತಿಕಟ್ಟಿದ್ದಾರೆ. ಉತ್ತರಪ್ರದೇಶ ಮತ್ತು ಆಸ್ಸಾಂ ರಾಜ್ಯಗಳಲ್ಲೂ ಇಂತಹ ಕೃತ್ಯವನ್ನೇ ಮುಂದುವರಿಸಿದ್ದಾರೆ ಎಂದು ಕಿಡಿಕಾರಿದರು.
 
ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರದ ಅವಧಿಯಲ್ಲಿ ಶಾಂತಿಯ ತಾಣಗಳಾಗಿದ್ದ ರಾಜ್ಯಗಳು ಪ್ರಧಾನಿ ಮೋದಿ ಸರಕಾರದ ಅವಧಿಯಲ್ಲಿ ಇಂದು ಗಲಭೆಗಳಿಗೆ ಹೆಸರುವಾಸಿಯಾಗಿವೆ ಎಂದು ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಲೇವಡಿ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments