Select Your Language

Notifications

webdunia
webdunia
webdunia
webdunia

ಪತ್ರಕರ್ತರು, ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ನಡೆದ ವಕೀಲರ ಹಲ್ಲೆಗೆ ಕೇಂದ್ರ ಹೊಣೆ: ಸಿಎಂ.ಕೇಜ್ರಿವಾಲ್

ಪತ್ರಕರ್ತರು, ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ನಡೆದ ವಕೀಲರ ಹಲ್ಲೆಗೆ ಕೇಂದ್ರ ಹೊಣೆ: ಸಿಎಂ.ಕೇಜ್ರಿವಾಲ್
ನವದೆಹಲಿ , ಗುರುವಾರ, 18 ಫೆಬ್ರವರಿ 2016 (17:14 IST)
ಪಟಿಯಾಲಾ ಹೌಸ್ ಕೋರ್ಟ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಕೇಂದ್ರ ಸರಕಾರವೇ ನೇರ ಹೊಣೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
 
ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರನ್ನು ಭೇಟಿ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೇಜ್ರಿವಾಲ್, ಕೇಂದ್ರ ಸರಕಾರದಿಂದ ನಿರ್ದೇಶನವಿರದಿದ್ದಲ್ಲಿ ಹಿಂಸಾಚಾರ ನಡೆಯುವಾಗ ದೆಹಲಿ ಪೊಲೀಸರು ಮೂಕ ಪ್ರೇಕ್ಷಕರಾಗಿರುತ್ತಿರಲಿಲ್ಲ ಎಂದು ಕಿಡಿಕಾರಿದರು. 
 
ದೆಹಲಿ ಪೊಲೀಸರು ಕೇಂದ್ರ ಸರಕಾರಕ್ಕೆ ವರದಿ ಸಲ್ಲಿಸುವುದರಿಂದ ನಡೆದ ಹಿಂಸಾಚಾರ ಘಟನೆಗೆ ಕೇಂದ್ರ ಸರಕಾರವನ್ನೇ ಹೊಣೆಯಾಗಿಸಬೇಕಾಗುತ್ತದೆ ಎಂದರು.
 
ಪಟಿಯಾಲಾ ಕೋರ್ಟ್‌ನಲ್ಲಿ ಪತ್ರಕರ್ತರು ಮತ್ತು ಜೆಎನ್‌ಯು ವಿದ್ಯಾರ್ಥಿಗಳ ಮೇಲೆ ನಡೆದ ದಾಳಿ ಸುಪ್ರೀಂಕೋರ್ಟ್‌ಗೆ ಸವಾಲಾಗಿ ಪರಿಣಮಿಸಿತ್ತು ಎಂದು ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಳವಳ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada