Webdunia - Bharat's app for daily news and videos

Install App

ಸ್ವರ್ಣಮಂದಿರದಲ್ಲಿ ಪಾತ್ರೆಗಳನ್ನು ತೊಳೆದು ಸ್ವಚ್ಚಗೊಳಿಸಿದ ಅರವಿಂದ್ ಕೇಜ್ರಿವಾಲ್

Webdunia
ಸೋಮವಾರ, 18 ಜುಲೈ 2016 (13:25 IST)
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸ್ವರ್ಣಮಂದಿರದಲ್ಲಿ ಪಾತ್ರೆಗಳನ್ನು ತೊಳೆಯುವ ಮೂಲಕ ಕ್ಷಮೆಯಾಚಿಸಿದ್ದಾರೆ.
 
ಆಮ್ ಆದ್ಮಿ ಪಕ್ಷ ಯುವಕರಿಗಾಗಿ ಹೊರಡಿಸಲಾಗಿದ್ದ ಪ್ರಣಾಳಿಕೆಯಲ್ಲಿ ಪಕ್ಷದ ಚಿಹ್ನೆಯೊಂದಿಗೆ ಸ್ವರ್ಣದೇವಾಲಯದ ಚಿತ್ರವನ್ನು ಪ್ರಕಟಿಸಿತ್ತು. ಇದರಿಂದ ಸಿಖ್ ಸಮುದಾಯದವರು ಕ್ಷಮೆಯಾಚಿಸುವಂತೆ ಒತ್ತಡ ಹೇರಿದ್ದರು ಎನ್ನಲಾಗಿದೆ. 
 
ನಿನ್ನೆ ರಾತ್ರಿ ನಗರಕ್ಕೆ ಬಂದಿಳಿದ ಕೇಜ್ರಿವಾಲ್ ಸುಮಾರು 45 ನಿಮಿಷಗಳ ಕಾಲ ಪಾತ್ರೆಗಳನ್ನು ತೊಳೆದು, ನಂತರ ದೇವಾಲಯದಲ್ಲಿ ಸಿಕ್ ಸಮುದಾಯದ ಕ್ಷಮೆಯಾಚಿಸಿದರು. ನಂತರ ಸುಮಾರು ಅರ್ಧಗಂಟೆಗಳ ಕಾಲ ಮೌನವಾಗಿ ಕುಳಿತು ಪ್ರಾರ್ಥನೆ ಸಲ್ಲಿಸಿದರು ಎಂದು ಆಪ್ ನಾಯಕರು ತಿಳಿಸಿದ್ದಾರೆ. 
 
ನಾವು  ಯುವಕರಿಗಾಗಿ ಹೊರಡಿಸಿದ ಪ್ರಣಾಳಿಕೆಯಲ್ಲಿ ಗೊತ್ತಿದ್ದೋ ಅಥವಾ ಇಲ್ಲವೋ ಮಾಡಿರುವ ತಪ್ಪಿಗಾಗಿ ಕ್ಷಮೆ ಕೋರಲು ಇಲ್ಲಿಗೆ ಬಂದಿದ್ದೇನೆ. ದೇವಾಲಯದಲ್ಲಿ ಸೇವೆ ಸಲ್ಲಿಸಿ ಶಹಾಬಾದ್ ಕೀರ್ತನ್ ಕೇಳಿದ ನಂತರ ಮನಸ್ಸು ತುಂಬಾ ಹಗುರವಾಗಿದೆ ಎಂದು ಸುದ್ದಿಗಾರರಿಗೆ ತಿಳಿಸಿದರು.
 
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪ ಎದುರಿಸುತ್ತಿರುವ ಆಪ್ ವಕ್ತಾರ ಆಶೀಶ್ ಖೇತಾನ್ ಕೂಡಾ ಕೇಜ್ರಿವಾಲ್ ಅವರೊಂದಿಗೆ ಉಪಸ್ಥಿತರಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor: ಪಾಕ್‌ಗೆ ಸಹಾಯ ಮಾಡಿದ್ದಕ್ಕೆ ಟರ್ಕಿಗೆ ತಕ್ಕ ಉತ್ತರ ಕೊಟ್ಟ ಭಾರತ

ಭಯೋತ್ಪಾದಕರಿಗೆ ಪಾಠ ಕಲಿಸಲು ಅವರ ಸಹೋದರಿಯನ್ನು ಕಳುಹಿಸಿದೆವು: ಸೋಫಿಯಾ ಖುರೇಷಿ ವಿರುದ್ಧದ ವಿಜಯ್ ಶಾ ಹೇಳಿಕೆಗೆ ಆಕ್ರೋಶ

ಮೂಕ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಅರೋಪ, ನ್ಯಾಯಕ್ಕಾಗಿ ಶವವಿಟ್ಟು ಪ್ರತಿಭಟನೆ

ಅರುಣಾಚಲ ಪ್ರದೇಶದ ಮೇಲೆ ಹಕ್ಕು ಚಲಾಯಿಸಲು ಬಂದ ಚೀನಾಗೆ ಖಡಕ್‌ ಉತ್ತರ ಕೊಟ್ಟ ಭಾರತ

ಭಾರತದ ಮೇಲಿನ ದಾಳಿಗೆ ಪಾಕ್‌ಗೆ ಸಹಾಯ ಮಾಡಿದ ಟರ್ಕಿ, ಕಳುಹಿಸಿದ ಡ್ರೋನ್‌ಗಳ ಲೆಕ್ಕಾ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments