Publish Date: Mon, 21 Feb 2022 (13:29 IST)
Updated Date: Mon, 21 Feb 2022 (13:31 IST)
ಚಂಡೀಗಢ : ಆಮ್ ಆದ್ಮಿ ಪಕ್ಷದ (ಎಎಪಿ) ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ,
ಅವರು ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಯಾವುದೇ ಬದಲಾವಣೆಯನ್ನು ತರುವುದಿಲ್ಲ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್ಜಿತ್ ಸಿಂಗ್ ಚನ್ನಿ ಹೇಳಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಬದಲಿಗೆ ಪಂಜಾಬ್ನಲ್ಲಿ ಎಎಪಿ ಅಧಿಕಾರಕ್ಕೆ ಬಂದರೆ ಯಾವುದೇ ಬದಲಾವಣೆಯಾಗುವುದಿಲ್ಲ, ಏಕೆಂದರೆ ಅವರು ಎಲ್ಲಾ ಕಡೆಯಿಂದ ತಿರಸ್ಕರಿಸಲ್ಪಟ್ಟ ರಾಜಕೀಯ ನಾಯಕರನ್ನು ಹೊಂದಿದ್ದಾರೆ.
ಅರವಿಂದ್ ಕೇಜ್ರಿವಾಲ್ ಅವರು ಕ್ರಾಂತಿಕಾರಿಯೂ ಅಲ್ಲ ಅಥವಾ ಭಗತ್ ಸಿಂಗ್ ಶಿಷ್ಯರೂ ಅಲ್ಲ ಎಂದು ಕಿಡಿಕಾರಿದ್ದಾರೆ.
ಅರವಿಂದ್ ಕೇಜ್ರಿವಾಲ್ ದೊಡ್ಡ ಸುಳ್ಳುಗಾರ, ದೊಡ್ಡ ದೊಡ್ಡ ಸುಳ್ಳುಗಳನ್ನೇ ಹೇಳುತ್ತಾರೆ. ಕೆಲವೊಮ್ಮೆ ಅವರು ನೀಡಿದ ಹೇಳಿಕೆಗಳನ್ನೇ ತಿರುಗಿಸುತ್ತಾರೆ. ಮತ್ತೆ ಕೆಲವೊಮ್ಮೆ ಕ್ಷಮೆಯಾಚಿಸುತ್ತಾರೆ ಎಂದಿದ್ದಾರೆ.