Webdunia - Bharat's app for daily news and videos

Install App

ಕೇಜ್ರಿವಾಲ್-ಕಮಲ್ ಹಾಸನ್ ಮೀಟಿಂಗ್! ಏನಿದರ ಮರ್ಮ?

Webdunia
ಗುರುವಾರ, 21 ಸೆಪ್ಟಂಬರ್ 2017 (09:51 IST)
ನವದೆಹಲಿ: ರಾಜಕೀಯಕ್ಕೆ ಧುಮುಕಲು ಬಯಸಿರುವ ಕಮಲ್ ಹಾಸನ್ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಪರಸ್ಪರ ಭೇಟಿಯಾಗುತ್ತಿರುವುದು ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದೆ.


ತಮಿಳು ನಟ ಕಮಲ್ ಹಾಸನ್ ಈಗಾಗಲೇ ಸ್ವಂತ ಪಕ್ಷ ಸ್ಥಾಪಿಸುವುದಾಗಿ ಹೇಳಿಕೊಂಡಿದ್ದರು. ಅಲ್ಲದೆ, ಸೆಪ್ಟೆಂಬರ್ ಕೊನೆಯ ವಾರ ಅಥವಾ ದೀಪಾವಳಿ ವೇಳೆಗೆ ಹೊಸ ಪಕ್ಷದ ಘೋಷಣೆ ಮಾಡುತ್ತಾರೆಂದು ಮೂಲಗಳಿಂದ ತಿಳಿದು ಬಂದಿತ್ತು. ಈ ಹಿನ್ನಲೆಯಲ್ಲಿ ಈ ಇಬ್ಬರೂ ನಾಯಕರು ಜತೆಗೇ ಭೋಜನ ಕೂಟ ನಡೆಸಲಿರುವುದು ಸಾಕಷ್ಟು ಕುತೂಹಲ ಕೆರಳಿಸಿದೆ.

ಚೆನ್ನೈಗೆ ಇಂದು ಆಗಮಿಸಲಿರುವ ಕೇಜ್ರಿವಾಲ್ ಕಮಲ್ ಹಾಸನ್ ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ. ಈ ಮೊದಲು ಕಮಲ್ ಹಾಸನ್ ಎಡರಂಗದ ನಾಯಕರನ್ನೂ ಭೇಟಿಯಾಗಿದ್ದರು.  ಆಡಳಿತಾರೂಢ ಎಐಎಡಿಎಂಕೆ ಪಕ್ಷದ ವಿರೋಧಿಯಾಗಿರುವ ಕಮಲ್ ಹಾಸನ್ ರಾಜಕೀಯ ಎಂಟ್ರಿಗೆ ಈ ಮೂಲಕ ಭರ್ಜರಿ ತಯಾರಿ ನಡೆಸುತ್ತಿರುವುದು ಪಕ್ಕಾ ಆಗಿದೆ.

ಇದನ್ನೂ ಓದಿ…  ಭಾರತಕ್ಕೆ ಪಾಕ್ ಪ್ರಧಾನಿ ಬೆದರಿಕೆ

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments