Webdunia - Bharat's app for daily news and videos

Install App

ದೆಹಲಿ ಬಿಕ್ಕಟ್ಟಿನ ಬಳಿಕ ಪಂಜಾಬ್ ದಾರಿತಪ್ಪಿಸುವ ಕೇಜ್ರಿವಾಲ್ : ಬಿಜೆಪಿ

Webdunia
ಶುಕ್ರವಾರ, 9 ಸೆಪ್ಟಂಬರ್ 2016 (20:00 IST)
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಪಂಜಾಬ್‌ನಲ್ಲಿ ಚುನಾವಣೆ ಪ್ರಚಾರದ ಪ್ರಯೋಗಕ್ಕೆ ಇಳಿದ ಕೂಡಲೇ ದೆಹಲಿ ಬಿಜೆಪಿ ಆರೋಪಗಳ ಸುರಿಮಳೆ ಸುರಿಸಿದೆ. ದೆಹಲಿಯಲ್ಲಿ ಆಡಳಿತಾತ್ಮಕ ಬಿಕ್ಕಟ್ಟು ಸೃಷ್ಟಿಸಿದ ಪಕ್ಷವು ಪಂಜಾಬಿನ ಜನರ ದಿಕ್ಕು ತಪ್ಪಿಸುತ್ತಿದ್ದಾರೆಂದು ಟೀಕಿಸಿದರು.
 
ಪಂಜಾಬ್‌ನ ಮೂಲೆ ಮೂಲೆಯಲ್ಲೂ ಪಂಜಾಬಿನ ಜನರು  ಕೇಜ್ರಿವಾಲ್ ದುಷ್ಕರ್ಮಗಳನ್ನು ಬಯಲುಮಾಡುವುದನ್ನು ದೆಹಲಿ ಬಿಜೆಪಿ ಖಾತರಿ ಮಾಡಲಿದೆ ಎಂದು ನಗರ ಬಿಜೆಪಿ ಮುಖಂಡ ಸತೀಶ್ ಉಪಾಧ್ಯಾಯ ತಿಳಿಸಿದರು.

ದೆಹಲಿ ಬಿಜೆಪಿ ಘಟಕದ ಕಚೇರಿಯಲ್ಲಿ ಉಪಾಧ್ಯಾಯ, ಪ್ರತಿಪಕ್ಷದ ನಾಯಕ ವಿಜೇಂದ್ರ ಗುಪ್ತಾ, ಸಂಸದ ಮೀನಾಕ್ಷಿ ಲೇಖಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದರು. 
 
ಸಂಸದೀಯ ಕಾರ್ಯದರ್ಶಿಗಳ ನೇಮಕವನ್ನು ಗುಪ್ತಾ ತರಾಟೆಗೆ ತೆಗೆದುಕೊಂಡು ಸಚಿವರ ರೀತಿ ಎಲ್ಲಾ ಸೌಲಭ್ಯಗಳನ್ನು ಅವರಿಗೆ ಕಲ್ಪಿಸಲಾಗಿದೆ ಎಂದು ಟೀಕಿಸಿದರು.
 
ಕೇಜ್ರಿವಾಲ್ ಸರ್ಕಾರ 21 ಎಎಪಿ ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳಾಗಿ ನೇಮಿಸಿದ ಆದೇಶವನ್ನು ಬದಿಗಿರಿಸುವಂತೆ ದೆಹಲಿ ಹೈಕೋರ್ಟ್ ಆದೇಶ ನೀಡುವ ಮೂಲಕ ಕೇಜ್ರಿವಾಲ್ ಸರ್ಕಾರಕ್ಕೆ ಹೊಸ ಪೆಟ್ಟು ಬಿದ್ದಿದೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments