Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಕೇಜ್ರಿವಾಲ್‌‌ಗೆ ಗಂಟಲು ಶಸ್ತ್ರಚಿಕಿತ್ಸೆ

Webdunia
ಮಂಗಳವಾರ, 6 ಸೆಪ್ಟಂಬರ್ 2016 (13:25 IST)
ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಆಗಿಂದಾಗೆ ಮರುಕಳಿಸುವ ಕೆಮ್ಮಿನ ಸಮಸ್ಯೆ ಗುಣಪಡಿಸಲು ಗಂಟಲು ಶಸ್ತ್ರಚಿಕಿತ್ಸೆ ಸಲುವಾಗಿ ಹಾಗೂ ಪಂಜಾಬ್‌ನಲ್ಲಿ ಚುನಾವಣೆಗೆ ಎಎಪಿಯ ಸಿದ್ಧತೆ ಅವಲೋಕನಕ್ಕಾಗಿ ರಾಜಧಾನಿಯಿಂದ 15 ದಿನಗಳ ಕಾಲ ದೂರವುಳಿಯಲಿದ್ದಾರೆ. ಕೇಜ್ರಿವಾಲ್ ಕೆಮ್ಮಿನ ಸಮಸ್ಯೆ ನಿವಾರಣೆಗೆ ಸೆ. 13ರಂದು ಬೆಂಗಳೂರಿನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದು, ಅಲ್ಲಿ 10 ದಿನಗಳ ವಿಶ್ರಾಂತಿ ತೆಗೆದುಕೊಳ್ಳಲಿದ್ದಾರೆ.
 
ಬೆಂಗಳೂರಿಗೆ ತೆರಳುವ ಮುನ್ನ ಮುಖ್ಯಮಂತ್ರಿ ಸೆ. 8ರಿಂದ ನಾಲ್ಕು ದಿನಗಳ ಕಾಲ ಪಂಜಾಬ್‌ಗೆ ಭೇಟಿ ನೀಡಲಿದ್ದಾರೆ. ಪಂಜಾಬ್‌ನಲ್ಲಿ ಪಕ್ಷದ ಮುಖಂಡರನ್ನು ಭೇಟಿ ಮಾಡಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ.
 
ಇದಾದ ಬಳಿಕ ಬೆಂಗಳೂರಿಗೆ ಸೆ. 12ರಂದು ತೆರಳಿ ಮರುದಿನವೇ ಶಸ್ತ್ರಚಿಕಿತ್ಸೆಗೆ ಒಳಪಡಲಿದ್ದಾರೆ. ಸೆ. 22ರಂದು ಅವರು ಹಿಂತಿರುಗುವ ನಿರೀಕ್ಷೆಯಿದೆ ಎಂದು ಸರ್ಕಾರಿ ಹಿರಿಯ ಅಧಿಕಾರಿ ತಿಳಿಸಿದರು.
 
ಅವರ ಅನುಪಸ್ಥಿತಿಯಲ್ಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮುಖ್ಯಮಂತ್ರಿಗಳ ಕೆಲಸವನ್ನು ನಿರ್ವಹಿಸಲಿದ್ದಾರೆ.
ಕಳೆದ ತಿಂಗಳು ಕೇಜ್ರಿವಾಲ್ ಧರ್ಮಶಾಲಾದ ಧ್ಯಾನಕೇಂದ್ರದಲ್ಲಿ  ಆ. 2ರಿಂದ 11ರವರೆಗೆ ವಿಪಾಸನಾ ಸೆಷನ್‌ನಲ್ಲಿ ಭಾಗವಹಿಸಿದ್ದರು. ಜನವರಿಯಲ್ಲಿ ಬೆಂಗಳೂರಿನ ಜಿಂಡಾಲ್ ನಿಸರ್ಗ ಚಿಕಿತ್ಸೆಯ ಕೇಂದ್ರದಲ್ಲಿ ನ್ಯಾಚ್ಯುರೋಪತಿ ಚಿಕಿತ್ಸೆಗೆ ಒಳಪಟ್ಟಿದ್ದರು.

ತಾಜಾ ಸುದ್ದಿಗಳನ್ನು ಓದಲು ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 
.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments