Select Your Language

Notifications

webdunia
webdunia
webdunia
webdunia

ಕೇಜ್ರಿವಾಲ್‌ರಿಂದ ಗೋವಾ ವಿಧಾನಸಭೆ ಚುನಾವಣೆಗೆ ರಣತಂತ್ರ

ಅರವಿಂದ್ ಕೇಜ್ರಿವಾಲ್
ಪಣಜಿ , ಗುರುವಾರ, 21 ಜುಲೈ 2016 (18:48 IST)
ಮುಂಬರುವ ಗೋವಾ ವಿಧಾನಸಭೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಸ್ಪರ್ಧಿಸಲಿರುವ ಹಿನ್ನೆಲೆಯಲ್ಲಿ, ಆಪ್ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಮುಂದಿನ ತಿಂಗಳು ಗೋವಾ ರಾಜ್ಯದ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಆಪ್ ಮೂಲಗಳು ತಿಳಿಸಿವೆ. 
 
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಗಸ್ಟ್ ಮೊದಲನೇ ವಾರದಲ್ಲಿ ರಾಜ್ಯಕ್ಕೆ ಭೇಟಿ ನೀಡಲಿದ್ದು, ಇದು ಅವರ ಮೂರನೇ ಭೇಟಿಯಾಗಿದೆ ಎಂದು ಗೋವಾದ ಆಪ್ ಲಕ್ತಾರ ರೂಪೇಶ್ ಶಿಂಕ್ರೆ ತಿಳಿಸಿದ್ದಾರೆ. 
 
ಗೋವಾ ಭೇಟಿಯ ಸಂದರ್ಭದಲ್ಲಿ ಕೇಜ್ರಿವಾಲ್, ಕಬ್ಬಿಣ ಅದಿರು ಗಣಿಗಾರಿಕೆಯಿಂದ ನೊಂದವರಿಗೆ, ಮಹಿಳಾ ಸ್ವ-ಸಹಾಯ ಗುಂಪುಗಳು, ರೈತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ. 
 
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ 40 ಸ್ಥಾನಗಳಲ್ಲಿ ಆಪ್ ಪಕ್ಷ ಸ್ಪರ್ಧಿಸಲಿದೆ ಎಂದು ಆಪ್ ಪಕ್ಷ ಘೋಷಿಸಿದೆ.
 
ಕಳೆದ ಮೇ 23 ರಂದು ಗೋವಾ ರಾಜ್ಯಕ್ಕೆ ಭೇಟಿ ನೀಡಿ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿದ ಕೇಜ್ರಿವಾಲ್, ಬಿಜೆಪಿ ಮತ್ತು ಕಾಂಗ್ರೆಸ್ ಭ್ರಷ್ಟಾಚಾರದಲ್ಲಿ ಪರಸ್ಪರ ಕೈ ಜೋಡಿಸಿವೆ ಎಂದು ಆರೋಪಿಸಿದ್ದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಚಿವ ಹುದ್ದೆ, ಕೆಪಿಸಿಸಿ ಅಧ್ಯಕ್ಷ ಸ್ಥಾನ ಎರಡು ಬೇಕೆಂದು ಪಟ್ಟು ಹಿಡಿದ ಡಿ.ಕೆ.ಶಿವಕುಮಾರ್