Select Your Language

Notifications

webdunia
webdunia
webdunia
webdunia

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

CPM Leader Murder Case

Sampriya

ಕಣ್ಣೂರು , ಗುರುವಾರ, 8 ಜನವರಿ 2026 (19:31 IST)
ಕಣ್ಣೂರು (ಕೇರಳ): 2008ರಲ್ಲಿ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಕೊಲೆ ಪ್ರಕರಣಕ್ಕೆ ಸಂಬಂಧ ತಲಶ್ಶೇರಿಯ ನ್ಯಾಯಾಲಯವು ಗುರುವಾರ ಏಳು ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಿದೆ.

ವಿಮಲ್ ಜೆ. ಸುಮಿತ್ ಅಲಿಯಾಸ್ ಕುಟ್ಟನ್, ಕೆ.ಕೆ ಪ್ರಜೇಶ್ ಬಾಬು, ಬಿ.ನಿಧಿನ್, ಕೆ.ಸನಲ್, ಸ್ಮಿಜೋಶ್, ಸಜೀಶ್ ಮತ್ತು ವಿ ಜಯೇಶ್ ಅವರನ್ನು ತಪ್ಪಿತಸ್ಥರು ಎಂದು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರು ಘೋಷಿಸಿ, ಶಿಕ್ಷೆಯನ್ನು ಪ್ರಕಟಿಸಿದ್ದಾರೆ. 

ಇನ್ನೂ ಈ ಪ್ರಕರಣದಲ್ಲಿ ಆರೋಪಿಗಳಾದ ಸಂತೋಷ್ ಕುಮಾರ್, ಬಿ.ಶರತ್, ಇ.ಕೆ. ಸನೀಶ್ ಮತ್ತು ಕುನ್ನುಂಪ್ರತ್ ಅಜೇಶ್ ಅವರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಆದರೆ, ಎಂಟನೇ ಆರೋಪಿ ಕೆ. ಅಜಿತ್ ವಿಚಾರಣೆಯ ವೇಳೆ ಮೃತಪಟ್ಟಿದ್ದರು.

2008ರ ಡಿಸೆಂಬರ್ 31ರಂದು ತಲಶ್ಶೇರಿಯ ಬಳಿಯ ಥಲೈನಲ್ಲಿ ಸಿಪಿಐ(ಎಂ) ಕಾರ್ಯಕರ್ತ ಲತೀಶ್ ಅವರನ್ನು ಹತ್ಯೆ ಮಾಡಲಾಗಿತ್ತು. ಇನ್ನೂ ರಾಜಕೀಯ ದ್ವೇಷಕ್ಕೆ ನಡೆದ ದಾಳಿಯಲ್ಲಿ ಲತೀಶ್ ಸ್ನೇಹಿತ ಕೂಡಾ ಗಾಯಗೊಂಡಿದ್ದರು. 

ಆರೋಪಿಗಳ ಮೇಲೆ ಗಲಭೆ, ಕ್ರಿಮಿನಲ್ ಬೆದರಿಕೆ, ಪಿತೂರಿ, ಕೊಲೆ, ಕೊಲೆ ಯತ್ನ ಸೇರಿದಂತೆ ಐಪಿಸಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ