Select Your Language

Notifications

webdunia
webdunia
webdunia
webdunia

ಕೇರಳ: ದುಷ್ಕರ್ಮಿಗಳಿಂದ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ

ಕೇರಳ: ದುಷ್ಕರ್ಮಿಗಳಿಂದ ಆರೆಸ್ಸೆಸ್ ಕಾರ್ಯಕರ್ತನ ಹತ್ಯೆ
ತಿರುವನಂತಪುರಂ , ಭಾನುವಾರ, 30 ಜುಲೈ 2017 (11:11 IST)
ಆರೆಸ್ಸೆಸ್ ಕಾರ್ಯಕರ್ತ ರಾಜೇಶ್‌ನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ ಹೇಯ ಘಟನೆ ವರದಿಯಾಗಿದೆ. ರಾಜೇಶ್ ಹತ್ಯೆ ಖಂಡಿಸಿ ರಾಜ್ಯದಾದ್ಯಂತ ಬಂದ್‌ಗೆ ಬಿಜೆಪಿ ಕರೆ ನೀಡಿದೆ.
 
ದುಷ್ಕರ್ಮಿಗಳು ನಿನ್ನೆ ರಾತ್ರಿ ರಾಜೇಶ್ ಕೈಯನ್ನು ಕತ್ತರಿಸಿದ್ದು, ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ. ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತದಾರೂ ಯಾವುದೇ ಪ್ರಯೋಜನವಾಗಲಿಲ್ಲ ಎಂದು ಮೂಲಗಳು ತಿಳಿಸಿವೆ.
 
ಕಳೆದ ಕೆಲ ದಿನಗಳಿಂದ ಎಡಪಕ್ಷಗಳು ಮತ್ತು ಬಿಜೆಪಿ ಕಾರ್ಯಕರ್ತರ ಮಧ್ಯೆ ತೀವ್ರ ವಾಗ್ವಾದ ಆರಂಭವಾಗಿದ್ದು, ಕೆಲವೆಡೆ ಕಲ್ಲು ತೂರಾಟ ನಡೆದ ಘಟನೆಗಳು ವರದಿಯಾಗಿದೆ.
 
ರಾಜೇಶ್ ಹತ್ಯೆಗೆ ಸಂಬಂಧಿಸಿದಂತೆ 8 ಜನ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. 
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯಸಭಾ ಚುನಾವಣೆ: ಶಾಸಕರಿಗೆ ಭದ್ರತೆ ನೀಡುವಂತೆ ಗುಜರಾತ್ ಸರ್ಕಾರಕ್ಕೆ ಚುನಾವಣಾ ಆಯೋಗ ಸೂಚನೆ