Webdunia - Bharat's app for daily news and videos

Install App

ಆಂಬ್ಯುಲೆನ್ಸ್ ಗೆ ದಾರಿ ಮಾಡಿ ಕೊಡದ ತಪ್ಪಿಗೆ ಕಾರು ಮಾಲಿಕನಿಗೆ ಬಿತ್ತು 2.5 ಲಕ್ಷ ದಂಡ: ವಿಡಿಯೋ

Krishnaveni K
ಸೋಮವಾರ, 18 ನವೆಂಬರ್ 2024 (15:33 IST)
Photo Credit: X
ತ್ರಿಶ್ಶೂರ್: ಆಂಬ್ಯುಲೆನ್ಸ್ ಬರುತ್ತಿದ್ದರೆ ಒಂದು ಜೀವ ಉಳಿಸುವ ನಿಟ್ಟಿನಿಂದ ಅದಕ್ಕೆ ದಾರಿ ಮಾಡಿಕೊಡಬೇಕು ಎಂಬುದು ಸಾಮಾನ್ಯ ಜ್ಞಾನವಾಗಿದೆ. ಆದರೆ ಅದನ್ನು ಮರೆತು ಅಮಾನುಷವಾಗಿ ನಡೆದುಕೊಂಡ ತಪ್ಪಿಗೆ ಕೇರಳದ ತ್ರಿಶ್ಶೂರ್ ನಲ್ಲಿ ಕಾರು ಮಾಲಿಕನಿಗೆ ಬರೋಬ್ಬರಿ 2.5 ಲಕ್ಷ ರೂ. ದಂಡ ವಿಧಿಸಲಾಗಿದೆ.

ಪೊನ್ನಾನಿಯಿಂದ ತ್ರಿಶ್ಶೂರ್ ಮೆಡಿಕಲ್ ಕಾಲೇಜು ಕಡೆಗೆ ರೋಗಿಯೊಬ್ಬರನ್ನು ಹೊತ್ತುಕೊಂಡು ತುರ್ತಾಗಿ ಆಂಬ್ಯುಲೆನ್ಸ್ ಸಾಗುತ್ತಿತ್ತು. ಆದರೆ ಆಂಬ್ಯುಲೆನ್ಸ್ ಎದುರಿಗೆ ಚಲಿಸುತ್ತಿದ್ದ Maruti Suzuki Ciaz ಕಾರು ಎಷ್ಟೇ ಹಾರ್ನ್ ಹಾಕಿದರೂ ದಾರಿ ಬಿಡಲಿಲ್ಲ. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಾಮಾನ್ಯವಾಗಿ ಎಷ್ಟೇ ಟ್ರಾಫಿಕ್ ಇದ್ದರೂ ಆಂಬ್ಯುಲೆನ್ಸ್ ಗಳಿಗೆ ಇತರೆ ವಾಹನಗಳು ದಾರಿ ಮಾಡಿಕೊಡಲೇಬೇಕಾಗುತ್ತದೆ. ಆದರೆ ಇಲ್ಲಿ ಎಷ್ಟೇ ಹಾರ್ನ್ ಹೊಡೆದರೂ ಸೈಡು ಬಿಡದೇ ಬೇಕೆಂದೇ ಕಾರು ಚಾಲಕ ಆಂಬ್ಯುಲೆನ್ಸ್ ಗೆ ಬ್ಲಾಕ್ ಮಾಡುತ್ತಿದ್ದ. ಇದು ಟ್ರಾಫಿಕ್ ಪೊಲೀಸರ ಗಮನಕ್ಕೆ ಬಂದಿದೆ.

ಈ ಸಂಬಂಧ ನೇರವಾಗಿ ಕಾರು ಮಾಲಿಕರ ಮನೆಗೆ ತೆರಳಿದ ಟ್ರಾಫಿಕ್ ಪೊಲೀಸರು 2.5 ಲಕ್ಷ ರೂ.ಗಳ ದಂಡ ಪಾವತಿಸುವಂತೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಘಟನೆ ಬಗ್ಗೆ ಸಾಕಷ್ಟು ಪ್ರತಿಕ್ರಿಯೆ ಬಂದಿದ್ದು ಕಾರು ಚಾಲಕನಿಗೆ ಛೀಮಾರಿ ಹಾಕಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments