Webdunia - Bharat's app for daily news and videos

Install App

ಜನರೊಂದಿಗೆ ಸಂಪರ್ಕದಲ್ಲಿರಲು ಫೇಸ್‌ಬುಕ್ ಪೇಜ್ ಆರಂಭಿಸಿದ ಕೇರಳ ಸಿಎಂ

Webdunia
ಶನಿವಾರ, 2 ಜುಲೈ 2016 (19:00 IST)
ರಾಜ್ಯದ ಜನರೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿರಲು ಮತ್ತು ಸರಕಾರದ ನಿರ್ಧಾರಗಳನ್ನು ಹಂಚಿಕೊಳ್ಳಲು ಮುಖ್ಯಮಂತ್ರಿ ಪಿನರಾಯಿ ವಿಜಯನ್ ಫೇಸ್‌ಬುಕ್ ಪೇಜ್ ಆರಂಭಿಸಿದ್ದಾರೆ.
 
ಸಿಎಂ ವಿಜಯನ್ ತಮ್ಮ ಕಚೇರಿಯಲ್ಲಿ ಫೇಸ್‌ಬುಕ್ ಪೇಜ್ ಆರಂಭಿಸಿದ್ದು, ಸರಕಾರದ ಮಹತ್ವದ ನಿರ್ಧಾರಗಳು ಮತ್ತು ಹೊಸ ಯೋಜನೆಗಳ ಬಗ್ಗೆ ಜನತೆ ತಿಳಿದುಕೊಂಡು ಸಲಹೆ ಸೂಚನೆಗಳನ್ನು ನೀಡಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ.  
 
ಒಂದು ವಾರದ ಹಿಂದೆ ಫೇಸ್‌ಬುಕ್ ಪೇಜ್ ಸೃಷ್ಟಿಸಿದ್ದರೂ ನಿನ್ನೆ ಸಿಎಂ ವಿಜಯನ್ ಶುಭಾರಂಭ ಮಾಡಿದ್ದಾರೆ.  
 
ಫೇಸ್‌ಬುಕ್‌ನಲ್ಲಿ ಮೊದಲ ಬಾರಿಗೆ ಪೋಸ್ಟ್ ಮಾಡಿದ ಸಿಎಂ ವಿಜಯನ್, ಜನತೆಯೊಂದಿಗೆ ನಿರಂತರ ಸಂಪರ್ಕದಲ್ಲಿರಲು ಮತ್ತು ಸಚಿವಾಲಯದ ಮುಂದೆ ಎದುರಾಗುವ ಹಲವು ವಿಷಯಗಳ ಬಗ್ಗೆ ತಿಳಿದುಕೊಳ್ಳಲು ಸೃಷ್ಟಿಸಲಾಗಿದೆ ಎಂದು ತಿಳಿಸಿದ್ದಾರೆ.
 
ಸರಕಾರದ ಸಾಧನೆಗಳು ಮತ್ತು ಎದುರಾಗುವ ಸಮಸ್ಯೆಗಳ ಬಗ್ಗೆ ಜನತೆ ಸಲಹೆ ಸೂಚನೆಗಳನ್ನು ಕೊಡಬಹುದಾಗಿದೆ ಎಂದು ಮನವಿ ಮಾಡಿದ್ದಾರೆ.
 
ಸಿಎಂ ವಿಜಯನ್ ಅಧಿಕಾರಕ್ಕೆ ಬಂದು ಒಂದು ತಿಂಗಳ ಅವಧಿಯಲ್ಲಿ ಹಲವು ಪ್ರಮುಖ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಮೆಚ್ಚುಗೆ ಗಳಿಸಿದ್ದಾರೆ. ಇದೀಗ ಅವರ ಫೇಸ್‌ಬುಕ್ 88,614 ಲೈಕ್‌ಗಳನ್ನು ಪಡೆದಿದೆ.  

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ಮೇಲೆ ರೇಪ್ ಕೇಸ್ ಗೆ ಬಿಗ್ ಟ್ವಿಸ್ಟ್

ಕೇರಳ ಶಾಲೆಗಳಲ್ಲಿ ಜುಂಬಾ ನೃತ್ಜಕ್ಕೆ ಮುಸ್ಲಿಂ ಗುಂಪಿನಿಂದ ವಿರೋಧ

ಮಲೆ ಮಹದೇಶ್ವರ ಬೆಟ್ಟ: ಐದು ಹುಲಿಗಳ ಸಾವಿನ ಹಿಂದಿದೆ ಧ್ವೇಷದ ಕತೆ

ವಿಮಾನ ದುರಂತ: ತೀವ್ರವಾಗಿ ಮುಂದುವರೆದ ತನಿಖೆ

ಹುಲಿಗಳ ಸಾವು ಪ್ರಕರಣ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ವಿಜಯೇಂದ್ರ ಒತ್ತಾಯ

ಮುಂದಿನ ಸುದ್ದಿ
Show comments