Webdunia - Bharat's app for daily news and videos

Install App

ಕೇರಳದ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಗೆ ಸಿಎಂ ನೇರ ಹೊಣೆ: ಅಮಿತ್ ಶಾ

Webdunia
ಮಂಗಳವಾರ, 3 ಅಕ್ಟೋಬರ್ 2017 (17:56 IST)
ಕೇರಳದಲ್ಲಿ ನಡೆಯುತ್ತಿರುವ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರ ರಾಜಕೀಯ ಹತ್ಯೆಗಳಿಗೆ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇರ ಹೊಣೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಆರೋಪಿಸಿದ್ದಾರೆ.
  
ಕಳೆದ 2001ರಿಂದ ಕೇರಳದಲ್ಲಿ 120 ಬಿಜೆಪಿ ಮತ್ತು ಆರೆಸ್ಸೆಸ್ ಕಾರ್ಯಕರ್ತರ ಹತ್ಯೆಗಳಾಗಿವೆ. ರಾಜಕೀಯ ಹತ್ಯೆಗಳಿಗೆ ಯಾರು ಹೊಣೆ ಎನ್ನುವುದನ್ನು ಸಿಪಿಐ(ಎಂ) ಸರಕಾರ ಬಹಿರಂಗಪಡಿಸಲಿ ಎಂದು ಸವಾಲ್ ಹಾಕಿದ್ದಾರೆ.
 
ಕೇರಳದಲ್ಲಿ ನಡೆಯುತ್ತಿರುವ ಬಿಜೆಪಿ, ಆರೆಸ್ಸೆಸ್ ಕಾರ್ಯಕರ್ತರನ್ನು ಯಾರು ಹತ್ಯೆ ಮಾಡುತ್ತಿದ್ದಾರೆ? ಒಂದು ವೇಳೆ ನನ್ನ ಪ್ರಶ್ನೆಗೆ ಉತ್ತರಿಸದಿದ್ದಲ್ಲಿ ಸಿಎಂ ನೇರ ಹೊಣೆಯಾಗಿದ್ದಾರೆ ಎಂದು ಭಾವಿಸುವುದಾಗಿ ತಿಳಿಸಿದ್ದಾರೆ.
 
ಕೇರಳದಲ್ಲಿ ಬಿಜೆಪಿ ಪಕ್ಷ ಆಯೋಜಿಸಿದ ಜನ ರಕ್ಷ ಯಾತ್ರಾ ಸಮಾವೇಶ ಉದ್ಘಾಟನೆಗಾಗಿ ಅಮಿತ್ ಶಾ, ಕಣ್ಣೂರು ಜಿಲ್ಲೆಯ ಪಯಣ್ಣೂರುಗೆ ಆಗಮಿಸಿದ್ದಾರೆ. ಸಮಾವೇಶ ಆಕ್ಟೋಬರ್ 17 ರಂದು ಮುಕ್ತಾಯವಾಗಲಿದ್ದು ರಾಜ್ಯದಾದ್ಯಂತ ಪ್ರವಾಸ ಮಾಡಲಿದೆ ಎಂದು ಮೂಲಗಳು ತಿಳಿಸಿವೆ. 
 
ರಾಜ್ಯದಲ್ಲಿ ಕಮ್ಯೂನಿಷ್ಠ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲಾ ಆರೆಸ್ಸೆಸ್, ಬಿಜೆಪಿ ನಾಯಕರ ಹತ್ಯೆಗಳಾಗುತ್ತಿವೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಕಿಡಿಕಾರಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲಸಿನ ಹಣ್ಣು ತಿಂದು ವಾಹನ ಚಲಾಯಿಸುವಾಗ ಟ್ರಾಫಿಕ್ ಪೊಲೀಸರಿಗೆ ಸಿಕ್ಕಿಬಿದ್ರೆ ಕತೆ ಫಿನಿಶ್

ವಿಧಾನಸಭೆ ಗೆಲ್ಲಲು ನೀವೆಷ್ಟು ಅಕ್ರಮ ಮಾಡಿದ್ದೀರಿ: ರಾಹುಲ್ ಗಾಂಧಿಗೆ ಸಿಟಿ ರವಿ ತಿರುಗೇಟು

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಆರ್ ಎಸ್ಎಸ್ ವಿಷವಿದ್ದಂತೆ ಎಂದ ಮಲ್ಲಿಕಾರ್ಜುನ ಖರ್ಗೆ: ವಿಷ ಹಾಕಿದವರು ನೀವು ಎಂದ ವಿಜಯೇಂದ್ರ

ನಾಲ್ವಡಿ ಒಡೆಯರ್ ಎಲ್ಲಿ, ಗುಲಾಮಗಿರಿ ಮಾಡ್ತಿರುವ ನಿಮ್ಮಪ್ಪ ಸಿದ್ದರಾಮಯ್ಯ ಎಲ್ಲಿ: ಆರ್ ಅಶೋಕ್

ಮುಂದಿನ ಸುದ್ದಿ
Show comments