Webdunia - Bharat's app for daily news and videos

Install App

ಕೇರಳ: ಸಿಪಿಐ(ಎಂ), ಆರ್‌ಎಸ್ಎಸ್ ಕಾರ್ಯಕರ್ತರ ಹತ್ಯೆ

Webdunia
ಮಂಗಳವಾರ, 12 ಜುಲೈ 2016 (16:32 IST)
ಕೇರಳದ ಕಣ್ಣೂರಿನಲ್ಲಿ ಸೋಮವಾರ ರಾತ್ರಿ ಪ್ರತ್ಯೇಕ ಕಡೆಗಳಲ್ಲಿ ಸಿಪಿಐ(ಎಂ), ಆರ್‌ಎಸ್ಎಸ್ ಕಾರ್ಯಕರ್ತರ ಹತ್ಯೆಯಾಗಿದ್ದು ರಾಜಕೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. 

 
ಪೊಲೀಸ್ ಅಧೀಕ್ಷಕ ಸಂಜಯ್ ಗುರುದ್ದಿನ್ ಹೇಳುವ ಪ್ರಕಾರ , 36 ವರ್ಷದ ಸಿ.ವಿ. ಧನರಾಜ್(ಸಿಪಿಐಎಮ್) ಎಂಬುವವರನ್ನು ಅಪರಿಚಿತ ದುಷ್ಕರ್ಮಿಗಳ ಗುಂಪೊಂದು ಆತನ ಕುಟುಂಬದವರ ಮುಂದೆಯೇ ಕೊಚ್ಚಿ ಹಾಕಿದೆ. ಪಯನ್ನೂರು ಸಮೀಪ ರಾತ್ರಿ 10 ಗಂಟೆಗೆ ಈ ಘಟನೆ ನಡೆದಿದೆ.
 
ಎರಡು ತಾಸಿನ ನಂತರ ಅಣ್ಣುರ್ ಗ್ರಾಮದಲ್ಲಿ ಆಟೋ ಚಾಲಕ ಸಿ.ಕೆ. ರಾಮಚಂದ್ರನ್ ಎಂಬಾತನನ್ನು ಬೇರೊಂದು ಗುಂಪು ಕೊಲೆಗೈದಿದೆ. ಆತ ಆರ್‌ಎಸ್ಎಸ್ ಕಾರ್ಯಕರ್ತನಾಗಿದ್ದ ಎಂದು ಹೇಳಲಾಗುತ್ತಿದೆ.
 
ಪಿತೂರಿಯ ಭಾಗವಾಗಿ ಆರ್‌ಎಸ್ಎಸ್ ಈ ಕೃತ್ಯ ನಡೆಸಿದೆ ಎಂದು ಸಿಪಿಐ(ಎಂ) ಕಣ್ಣೂರು ಜಿಲ್ಲಾ ಕಾರ್ಯದರ್ಶಿ ಎಮ್.ವಿ. ಜಯರಾಜನ್ ಆರೋಪಿಸಿದ್ದಾರೆ. ಆರ್‌ಎಸ್ಎಸ್ ಹಿಂಸೆಗೆ ಪ್ರಚೋದಿಸುತ್ತಿವೆ. ಕಳೆದ ವಾರ ಅವರು ತಮ್ಮ ಹಿಟ್ ಲಿಸ್ಟ್‌ಲ್ಲಿರುವವರನ್ನು ಬಹಿರಂಗವಾಗಿ ಘೋಷಿಸಿದ್ದರು ಎಂದು ಜಯರಾಜನ್ ಹೇಳಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments