Webdunia - Bharat's app for daily news and videos

Install App

ಕೇರಳ ದೇವಾಲಯದಲ್ಲಿ ರೊಚ್ಚಿಗೆದ್ದ ಆನೆ, ಮೂವರನ್ನು ಬಲಿ ತೆಗೆದುಕೊಂಡ ವಿಡಿಯೋ ಇಲ್ಲಿದೆ

Krishnaveni K
ಶುಕ್ರವಾರ, 14 ಫೆಬ್ರವರಿ 2025 (09:15 IST)
Photo Credit: X
ಕೊಯಿಲಾಂಡಿ: ಕೇರಳದ ಕೊಯಿಲಾಂಡಿ ಬಳಿಯ ಮನಕಲಂಗರ ದೇವಾಲಯದಲ್ಲಿ ಜಾತ್ರೆ ವೇಳೆ ಆನೆ ರೊಚ್ಚಿಗೆದ್ದು ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡಿದ್ದು ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ.

ನಿನ್ನೆ ಸಂಜೆ ಉತ್ಸವದ ನಿಮಿತ್ತ ಆನೆಗಳನ್ನು ತರಲಾಗಿತ್ತು. ಇವುಗಳಿಗೆ ಭಾರೀ ಗಾತ್ರದ ಆಭರಣಗಳನ್ನು ಹಾಕಿ ರೆಡಿ ಮಾಡಲಾಗಿತ್ತು. ಆದರೆ ಉತ್ಸವದ ಸಂದರ್ಭದಲ್ಲಿ ಪಟಾಕಿ ಸಿಡಿಸಿದಾಗ ಆನೆಗಳು ರೊಚ್ಚಿಗೆದ್ದಿವೆ. ಪಟಾಕಿಯ ಸದ್ದಿಗೆ ರೊಚ್ಚಿಗೆದ್ದು ಓಡಾಡಿವೆ.

ಇದರಿಂದಾಗಿ ಜಾತ್ರೆಗೆಂದು ಸೇರಿದ್ದವರೂ ಗಾಬರಿಗೊಂಡು ದಿಕ್ಕಾಪಾಲಾಗಿ ಓಡಿದ್ದಾರೆ. ಈ ವೇಳೆ ಮೂವರು ವೃದ್ಧರು ಆನೆಯ ಕಾಲ್ತುಳಿತಕ್ಕೆ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಆನೆಗಳು ಕಂಬಕ್ಕೆ ಢಿಕ್ಕಿ ಹೊಡೆದ ಪರಿಣಾಮ ಕಂಬವೇ ಉರುಳಿ ಬಿದ್ದಿದೆ. ಈ ವೇಳೆ ಕಂಬದ ಅಡಿಯಲ್ಲಿ ಹಲವರು ಸಿಲುಕಿದ್ದಾರೆ.

ಘಟನೆಯಲ್ಲಿ 20 ಜನರಿಗೆ ಗಾಯಗಳಾಗಿವೆ. ಇದೀಗ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಬಳಿಕ ದೇವಾಲಯಗಳಲ್ಲಿ ಉತ್ಸವದ ವೇಳೆಗೆ ಆನೆಗಳನ್ನು ಬಳಸಬಹುದೇ ಎಂಬ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments