Select Your Language

Notifications

webdunia
webdunia
webdunia
webdunia

ವರದಕ್ಷಿಣೆ ಪಡೆಯಲ್ಲ: ಕೇರಳ ಸರ್ಕಾರಿ ನೌಕರರಿಗೆ ಘೋಷಣೆ ಕಡ್ಡಾಯ!

ವರದಕ್ಷಿಣೆ ಪಡೆಯಲ್ಲ: ಕೇರಳ ಸರ್ಕಾರಿ ನೌಕರರಿಗೆ ಘೋಷಣೆ ಕಡ್ಡಾಯ!
ತಿರುವನಂತಪುರಂ , ಸೋಮವಾರ, 26 ಜುಲೈ 2021 (08:40 IST)
ತಿರುವನಂತಪುರಂ(ಜು.26): ಹಲವು ವರದಕ್ಷಿಣೆ ಕಿರುಕುಳ ಸಾವು ಪ್ರಕರಣದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕೇರಳ ಸರ್ಕಾರ, ರಾಜ್ಯದ ಎಲ್ಲಾ ಪುರುಷ ಸರ್ಕಾರಿ ನೌಕರರು ‘ವಧುವಿನ ಕುಟುಂಬದಿಂದ ವರದಕ್ಷಿಣೆ ಪಡೆದಿಲ್ಲ, ಪಡೆಯುವುದಿಲ್ಲ’ ಎಂದು ಘೋಷಣಾ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಆದೇಶಿಸಿದೆ.

* ವರದಕ್ಷಿಣೆ ಪಿಡುಗು ತಡೆಯಲು ಇನ್ನೊಂದು ಕ್ರಮ
* ವರದಕ್ಷಿಣೆ ಪಡೆಯಲ್ಲ: ಕೇರಳ ಸರ್ಕಾರಿ ನೌಕರರಿಗೆ ಘೋಷಣೆ ಕಡ್ಡಾಯ

ನವವಿವಾಹಿತರು ವಿವಾಹವಾದ ಒಂದು ತಿಂಗಳ ಒಳಗಾಗಿ ಪ್ರಮಾಣಪತ್ರ ಸಲ್ಲಿಸಬೇಕು. ಅದರಲ್ಲಿ ಉದ್ಯೋಗಿಯ ಪತ್ನಿ, ತಂದೆ ಮತ್ತು ಮಾವನ ಸಹಿ ಇರಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಈ ಪ್ರಮಾಣ ಪತ್ರವನ್ನು ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಬೇಕು. ಸರ್ಕಾರದ ವಿವಿಧ ಇಲಾಖೆಗಳು ವರದಕ್ಷಿಣೆಗೆ ಪ್ರಚೋದಿಸಿಲ್ಲ, ಪಡೆದಿಲ್ಲ ಎಂದು ಉದ್ಯೋಗಿಗಳಿಂದ ಹೇಳಿಕೆ ಸಂಗ್ರಹಿಸಿ, ವರ್ಷಕ್ಕೆ 2 ಬಾರಿ ಏಪ್ರಿಲ್ ಮತ್ತು ಅಕ್ಟೋಬರ್ನಲ್ಲಿ ಜಿಲ್ಲಾ ವರದಕ್ಷಿಣೆ ನಿಷೇಧ ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಕ್ಷಿಣೆ ಕೇಳುವುದು ಮತ್ತು ಪಡೆಯುವುದು ಎರಡೂ ಶಿಕ್ಷಾರ್ಹ ಅಪರಾಧ. ತಪ್ಪಿತಸ್ಥರಿಗೆ ಕನಿಷ್ಠ 5 ವರ್ಷ ಸಜೆ ಮತ್ತು ಕನಿಷ್ಠ 15,000 ರು. ದಂಡ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಕೇರಳದಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ರಾಜ್ಯ ಸರ್ಕಾರ ಕೇರಳ ವರದಕ್ಷಿಣೆ ನಿಷೇಧ (ತಿದ್ದುಪಡಿ) ಕಾಯ್ದೆ-2021 ಜಾರಿ ಮಾಡಿ, ಪ್ರತಿ ಜಿಲ್ಲೆಗೂ ವರದಕ್ಷಿಣೆ ನಿಷೇಧ ಅಧಿಕಾರಿಗಳನ್ನು ನೇಮಕ ಮಾಡಿದೆ. ಇತ್ತೀಚೆಗೆ ಈ ಪಿಡುಗಿನ ವಿರುದ್ಧ ರಾಜ್ಯಪಾಲರು ಒಂದು ದಿನದ ಉಪವಾಸ ಕೂಡ ಮಾಡಿದ್ದರು.


Share this Story:

Follow Webdunia kannada

ಮುಂದಿನ ಸುದ್ದಿ

'ಗನ್ ಜತೆ ಒಂದು ಸೆಲ್ಫಿ'!