Webdunia - Bharat's app for daily news and videos

Install App

ವರದಕ್ಷಿಣೆ ಪಡೆಯಲ್ಲ: ಕೇರಳ ಸರ್ಕಾರಿ ನೌಕರರಿಗೆ ಘೋಷಣೆ ಕಡ್ಡಾಯ!

Webdunia
ಸೋಮವಾರ, 26 ಜುಲೈ 2021 (08:40 IST)
ತಿರುವನಂತಪುರಂ(ಜು.26): ಹಲವು ವರದಕ್ಷಿಣೆ ಕಿರುಕುಳ ಸಾವು ಪ್ರಕರಣದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕೇರಳ ಸರ್ಕಾರ, ರಾಜ್ಯದ ಎಲ್ಲಾ ಪುರುಷ ಸರ್ಕಾರಿ ನೌಕರರು ‘ವಧುವಿನ ಕುಟುಂಬದಿಂದ ವರದಕ್ಷಿಣೆ ಪಡೆದಿಲ್ಲ, ಪಡೆಯುವುದಿಲ್ಲ’ ಎಂದು ಘೋಷಣಾ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಆದೇಶಿಸಿದೆ.

* ವರದಕ್ಷಿಣೆ ಪಿಡುಗು ತಡೆಯಲು ಇನ್ನೊಂದು ಕ್ರಮ
* ವರದಕ್ಷಿಣೆ ಪಡೆಯಲ್ಲ: ಕೇರಳ ಸರ್ಕಾರಿ ನೌಕರರಿಗೆ ಘೋಷಣೆ ಕಡ್ಡಾಯ

ನವವಿವಾಹಿತರು ವಿವಾಹವಾದ ಒಂದು ತಿಂಗಳ ಒಳಗಾಗಿ ಪ್ರಮಾಣಪತ್ರ ಸಲ್ಲಿಸಬೇಕು. ಅದರಲ್ಲಿ ಉದ್ಯೋಗಿಯ ಪತ್ನಿ, ತಂದೆ ಮತ್ತು ಮಾವನ ಸಹಿ ಇರಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಈ ಪ್ರಮಾಣ ಪತ್ರವನ್ನು ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಬೇಕು. ಸರ್ಕಾರದ ವಿವಿಧ ಇಲಾಖೆಗಳು ವರದಕ್ಷಿಣೆಗೆ ಪ್ರಚೋದಿಸಿಲ್ಲ, ಪಡೆದಿಲ್ಲ ಎಂದು ಉದ್ಯೋಗಿಗಳಿಂದ ಹೇಳಿಕೆ ಸಂಗ್ರಹಿಸಿ, ವರ್ಷಕ್ಕೆ 2 ಬಾರಿ ಏಪ್ರಿಲ್ ಮತ್ತು ಅಕ್ಟೋಬರ್ನಲ್ಲಿ ಜಿಲ್ಲಾ ವರದಕ್ಷಿಣೆ ನಿಷೇಧ ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಕ್ಷಿಣೆ ಕೇಳುವುದು ಮತ್ತು ಪಡೆಯುವುದು ಎರಡೂ ಶಿಕ್ಷಾರ್ಹ ಅಪರಾಧ. ತಪ್ಪಿತಸ್ಥರಿಗೆ ಕನಿಷ್ಠ 5 ವರ್ಷ ಸಜೆ ಮತ್ತು ಕನಿಷ್ಠ 15,000 ರು. ದಂಡ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಕೇರಳದಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ರಾಜ್ಯ ಸರ್ಕಾರ ಕೇರಳ ವರದಕ್ಷಿಣೆ ನಿಷೇಧ (ತಿದ್ದುಪಡಿ) ಕಾಯ್ದೆ-2021 ಜಾರಿ ಮಾಡಿ, ಪ್ರತಿ ಜಿಲ್ಲೆಗೂ ವರದಕ್ಷಿಣೆ ನಿಷೇಧ ಅಧಿಕಾರಿಗಳನ್ನು ನೇಮಕ ಮಾಡಿದೆ. ಇತ್ತೀಚೆಗೆ ಈ ಪಿಡುಗಿನ ವಿರುದ್ಧ ರಾಜ್ಯಪಾಲರು ಒಂದು ದಿನದ ಉಪವಾಸ ಕೂಡ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments