Webdunia - Bharat's app for daily news and videos

Install App

ವರದಕ್ಷಿಣೆ ಪಡೆಯಲ್ಲ: ಕೇರಳ ಸರ್ಕಾರಿ ನೌಕರರಿಗೆ ಘೋಷಣೆ ಕಡ್ಡಾಯ!

Webdunia
ಸೋಮವಾರ, 26 ಜುಲೈ 2021 (08:40 IST)
ತಿರುವನಂತಪುರಂ(ಜು.26): ಹಲವು ವರದಕ್ಷಿಣೆ ಕಿರುಕುಳ ಸಾವು ಪ್ರಕರಣದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕೇರಳ ಸರ್ಕಾರ, ರಾಜ್ಯದ ಎಲ್ಲಾ ಪುರುಷ ಸರ್ಕಾರಿ ನೌಕರರು ‘ವಧುವಿನ ಕುಟುಂಬದಿಂದ ವರದಕ್ಷಿಣೆ ಪಡೆದಿಲ್ಲ, ಪಡೆಯುವುದಿಲ್ಲ’ ಎಂದು ಘೋಷಣಾ ಪ್ರಮಾಣಪತ್ರ ಸಲ್ಲಿಸಬೇಕು ಎಂದು ಆದೇಶಿಸಿದೆ.

* ವರದಕ್ಷಿಣೆ ಪಿಡುಗು ತಡೆಯಲು ಇನ್ನೊಂದು ಕ್ರಮ
* ವರದಕ್ಷಿಣೆ ಪಡೆಯಲ್ಲ: ಕೇರಳ ಸರ್ಕಾರಿ ನೌಕರರಿಗೆ ಘೋಷಣೆ ಕಡ್ಡಾಯ

ನವವಿವಾಹಿತರು ವಿವಾಹವಾದ ಒಂದು ತಿಂಗಳ ಒಳಗಾಗಿ ಪ್ರಮಾಣಪತ್ರ ಸಲ್ಲಿಸಬೇಕು. ಅದರಲ್ಲಿ ಉದ್ಯೋಗಿಯ ಪತ್ನಿ, ತಂದೆ ಮತ್ತು ಮಾವನ ಸಹಿ ಇರಬೇಕು ಎಂದು ಸುತ್ತೋಲೆ ಹೊರಡಿಸಿದೆ.
ಈ ಪ್ರಮಾಣ ಪತ್ರವನ್ನು ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೀಡಬೇಕು. ಸರ್ಕಾರದ ವಿವಿಧ ಇಲಾಖೆಗಳು ವರದಕ್ಷಿಣೆಗೆ ಪ್ರಚೋದಿಸಿಲ್ಲ, ಪಡೆದಿಲ್ಲ ಎಂದು ಉದ್ಯೋಗಿಗಳಿಂದ ಹೇಳಿಕೆ ಸಂಗ್ರಹಿಸಿ, ವರ್ಷಕ್ಕೆ 2 ಬಾರಿ ಏಪ್ರಿಲ್ ಮತ್ತು ಅಕ್ಟೋಬರ್ನಲ್ಲಿ ಜಿಲ್ಲಾ ವರದಕ್ಷಿಣೆ ನಿಷೇಧ ಅಧಿಕಾರಿಗಳಿಗೆ ವರದಿ ಸಲ್ಲಿಸಬೇಕು. ವರದಕ್ಷಿಣೆ ಕೇಳುವುದು ಮತ್ತು ಪಡೆಯುವುದು ಎರಡೂ ಶಿಕ್ಷಾರ್ಹ ಅಪರಾಧ. ತಪ್ಪಿತಸ್ಥರಿಗೆ ಕನಿಷ್ಠ 5 ವರ್ಷ ಸಜೆ ಮತ್ತು ಕನಿಷ್ಠ 15,000 ರು. ದಂಡ ವಿಧಿಸಲಾಗುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ಕೇರಳದಲ್ಲಿ ವರದಕ್ಷಿಣೆ ಕಿರುಕುಳ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇತ್ತೀಚೆಗೆ ರಾಜ್ಯ ಸರ್ಕಾರ ಕೇರಳ ವರದಕ್ಷಿಣೆ ನಿಷೇಧ (ತಿದ್ದುಪಡಿ) ಕಾಯ್ದೆ-2021 ಜಾರಿ ಮಾಡಿ, ಪ್ರತಿ ಜಿಲ್ಲೆಗೂ ವರದಕ್ಷಿಣೆ ನಿಷೇಧ ಅಧಿಕಾರಿಗಳನ್ನು ನೇಮಕ ಮಾಡಿದೆ. ಇತ್ತೀಚೆಗೆ ಈ ಪಿಡುಗಿನ ವಿರುದ್ಧ ರಾಜ್ಯಪಾಲರು ಒಂದು ದಿನದ ಉಪವಾಸ ಕೂಡ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments