Webdunia - Bharat's app for daily news and videos

Install App

ಕೇರಳ - ಕರ್ನಾಟಕ ಸಂಚಾರ ನಿರ್ಬಂಧ ತೆರವು

Webdunia
ಶುಕ್ರವಾರ, 19 ನವೆಂಬರ್ 2021 (20:41 IST)
ಕಾಸರಗೋಡು : ಕೇರಳ ಹಾಗೂ ಕರ್ನಾಟಕ ರಾಜ್ಯಗಳ ನಡುವಣ ಸಂಚಾರ ನಿರ್ಬಂಧ ತೆರವುಗೊಳಿಸಲಾಗಿದೆ.
ಕೇರಳದಲ್ಲಿ ಕೋವಿಡ್ ಪಾಸಿಟಿವ್ ದರ ಏರಿಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಮುಂಜಾಗ್ರತಾ ಕ್ರಮವಾಗಿ ಗಡಿ ಮೂಲಕ ಸಂಚಾರ ನಿರ್ಬಂಧ ಹೇರಿತ್ತು. ಲಾಕ್ಡೌನ್ ತೆರವುಗೊಳಿಸಿದರೂ ನಿರ್ಬಂಧ ಹೇರಿದ್ದಲ್ಲದೆ ದ. ಕ. ಪ್ರವೇಶಕ್ಕೆ ನೆಗೆಟಿವ್ ಸರ್ಟಿಫಿಕೆಟ್ ಕಡ್ಡಾಯಗೊಳಿಸಲಾಗಿತ್ತು. ಇದರಿಂದಾಗಿ ಕರ್ನಾಟಕವನ್ನೇ ಆಶ್ರಯಿಸಿರುವ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ಇತರ ಉದ್ದೇಶಕ್ಕಾಗಿ ಸಂಚರಿಸುವವರಿಗೆ ಅನನುಕೂಲವಾಗಿತ್ತು.
ದ. ಕ. ಜಿಲ್ಲಾಧಿಕಾರಿಗಳು ಅಂತಾರಾಜ್ಯ ಸಂಚಾರಕ್ಕೆ ಅನುಕೂಲವಾಗುವಂತೆ ನಿರ್ಬಂಧ ತೆರವುಗೊಳಿಸಿದ್ದಾರೆ. ಇದರಂತೆ ಶುಕ್ರವಾರದಿಂದ ಕಾಸರಗೋಡು - ಮಂಗಳೂರು, ಕಾಸರಗೋಡು - ಪುತ್ತೂರು ಹಾಗೂ ಕಾಸರಗೋಡು - ಸುಳ್ಯ ಮಾರ್ಗದಲ್ಲಿ ಬಸ್ ಸಂಚಾರ ಆರಂಭಗೊಂಡಿದೆ.
ಶುಕ್ರವಾರ ಕಾಸರಗೋಡಿನಿಂದ ಮಂಗಳೂರು ಕಡೆಗೆ ಕೇರಳ ರಸ್ತೆ ಸಾರಿಗೆ ಬಸ್ಗಳು ಹಾಗೂ ಮಂಗಳೂರಿನಿಂದ ಕಾಸರಗೋಡಿಗೆ ಕರ್ನಾಟಕ ರಸ್ತೆ ಸಾರಿಗೆ ಬಸ್ಗಳು ಸಂಚಾರ ನಡೆಸಿವೆ. ಕಾಸರಗೋಡಿನಿಂದ ಮಂಗಳೂರಿಗೆ ಶುಕ್ರವಾರ 26 ಕೆಎಸ್ಆರ್ಟಿಸಿ ಬಸ್ಗಳು ಸಂಚಾರ ಆರಂಭಿಸಿವೆ. ಅದೇ ರೀತಿ ಮಂಗಳೂರಿನಿಂದ 24 ಕರ್ನಾಟಕ ರಸ್ತೆ ಸಾರಿಗೆ ಬಸ್ ಸಹ ಸಂಚಾರ ಆರಂಭಿಸಿದೆ. ಪುತ್ತೂರು, ಸುಳ್ಯ ಕಡೆಗೂ ಬಸ್ ಆರಂಭಗೊಂಡಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments