Webdunia - Bharat's app for daily news and videos

Install App

ಕೇರಳ - ಕರ್ನಾಟಕ ಸಂಚಾರ ನಿರ್ಬಂಧ ತೆರವು

Webdunia
ಶುಕ್ರವಾರ, 19 ನವೆಂಬರ್ 2021 (20:41 IST)
ಕಾಸರಗೋಡು : ಕೇರಳ ಹಾಗೂ ಕರ್ನಾಟಕ ರಾಜ್ಯಗಳ ನಡುವಣ ಸಂಚಾರ ನಿರ್ಬಂಧ ತೆರವುಗೊಳಿಸಲಾಗಿದೆ.
ಕೇರಳದಲ್ಲಿ ಕೋವಿಡ್ ಪಾಸಿಟಿವ್ ದರ ಏರಿಕೆಯಾದ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಮುಂಜಾಗ್ರತಾ ಕ್ರಮವಾಗಿ ಗಡಿ ಮೂಲಕ ಸಂಚಾರ ನಿರ್ಬಂಧ ಹೇರಿತ್ತು. ಲಾಕ್ಡೌನ್ ತೆರವುಗೊಳಿಸಿದರೂ ನಿರ್ಬಂಧ ಹೇರಿದ್ದಲ್ಲದೆ ದ. ಕ. ಪ್ರವೇಶಕ್ಕೆ ನೆಗೆಟಿವ್ ಸರ್ಟಿಫಿಕೆಟ್ ಕಡ್ಡಾಯಗೊಳಿಸಲಾಗಿತ್ತು. ಇದರಿಂದಾಗಿ ಕರ್ನಾಟಕವನ್ನೇ ಆಶ್ರಯಿಸಿರುವ ಕಾಸರಗೋಡು ಜಿಲ್ಲೆಯ ವಿದ್ಯಾರ್ಥಿಗಳು, ಉದ್ಯೋಗಾರ್ಥಿಗಳು ಹಾಗೂ ಇತರ ಉದ್ದೇಶಕ್ಕಾಗಿ ಸಂಚರಿಸುವವರಿಗೆ ಅನನುಕೂಲವಾಗಿತ್ತು.
ದ. ಕ. ಜಿಲ್ಲಾಧಿಕಾರಿಗಳು ಅಂತಾರಾಜ್ಯ ಸಂಚಾರಕ್ಕೆ ಅನುಕೂಲವಾಗುವಂತೆ ನಿರ್ಬಂಧ ತೆರವುಗೊಳಿಸಿದ್ದಾರೆ. ಇದರಂತೆ ಶುಕ್ರವಾರದಿಂದ ಕಾಸರಗೋಡು - ಮಂಗಳೂರು, ಕಾಸರಗೋಡು - ಪುತ್ತೂರು ಹಾಗೂ ಕಾಸರಗೋಡು - ಸುಳ್ಯ ಮಾರ್ಗದಲ್ಲಿ ಬಸ್ ಸಂಚಾರ ಆರಂಭಗೊಂಡಿದೆ.
ಶುಕ್ರವಾರ ಕಾಸರಗೋಡಿನಿಂದ ಮಂಗಳೂರು ಕಡೆಗೆ ಕೇರಳ ರಸ್ತೆ ಸಾರಿಗೆ ಬಸ್ಗಳು ಹಾಗೂ ಮಂಗಳೂರಿನಿಂದ ಕಾಸರಗೋಡಿಗೆ ಕರ್ನಾಟಕ ರಸ್ತೆ ಸಾರಿಗೆ ಬಸ್ಗಳು ಸಂಚಾರ ನಡೆಸಿವೆ. ಕಾಸರಗೋಡಿನಿಂದ ಮಂಗಳೂರಿಗೆ ಶುಕ್ರವಾರ 26 ಕೆಎಸ್ಆರ್ಟಿಸಿ ಬಸ್ಗಳು ಸಂಚಾರ ಆರಂಭಿಸಿವೆ. ಅದೇ ರೀತಿ ಮಂಗಳೂರಿನಿಂದ 24 ಕರ್ನಾಟಕ ರಸ್ತೆ ಸಾರಿಗೆ ಬಸ್ ಸಹ ಸಂಚಾರ ಆರಂಭಿಸಿದೆ. ಪುತ್ತೂರು, ಸುಳ್ಯ ಕಡೆಗೂ ಬಸ್ ಆರಂಭಗೊಂಡಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುರಿ ದೇವಸ್ಥಾನ ಕಾಲ್ತುಳಿತ: ಜಿಲ್ಲಾಧಿಕಾರಿ ಎಸ್‌ಪಿಯನ್ನೇ ವರ್ಗಾವಣೆ ಮಾಡಿದ ಸರ್ಕಾರ

88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬಾನು ಪುಪ್ತಾಕ್‌

ಜೂನ್ 23ರಂದು ಇರಾನ್ ಜೈಲಿನ ಮೇಲೆ ಇಸ್ರೇಲ್ ದಾಳಿಯಲ್ಲಿ ಅಧಿಕಾರಿಗಳು ಸೇರಿ 71ಮಂದಿ ಸಾವು

ಅಶೋಕ್ ಜ್ಯೋತಿಷ್ಯ ಕಲಿತಿದ್ದರೆ ನನ್ನ ಭವಿಷ್ಯ ಕೇಳಬೇಕಿತ್ತು: ಡಿಕೆ ಶಿವಕುಮಾರ್‌

ಪುರಿ ಕಾಲ್ತುಳಿತ ದುರಂತ, ದೊಡ್ಡ ಎಚ್ಚರಿಕೆ: ರಾಹುಲ್ ಗಾಂಧಿ ಸಂತಾಪ

ಮುಂದಿನ ಸುದ್ದಿ
Show comments