Select Your Language

Notifications

webdunia
webdunia
webdunia
webdunia

ಹಲ್ಲು ಉಜ್ಜದೇ ಮುತ್ತು ಕೊಡಬೇಡ ಅಂದಿದ್ದಕ್ಕೆ ಪತ್ನಿಯನ್ನೇ ಕೊಂದ!

ಹಲ್ಲು ಉಜ್ಜದೇ ಮುತ್ತು ಕೊಡಬೇಡ ಅಂದಿದ್ದಕ್ಕೆ ಪತ್ನಿಯನ್ನೇ ಕೊಂದ!
bengaluru , ಬುಧವಾರ, 29 ಜೂನ್ 2022 (16:58 IST)
ಹಲ್ಲುಜ್ಜದೇ ತಮ್ಮ ಪುಟ್ಟ ಮಗುವಿಗೆ ಮುತ್ತಿಡಲು ಬಂದ ಪತಿಯನ್ನು ತಡೆದಿದ್ದಕ್ಕೆ ಹೆಂಡತಿಯನ್ನೇ ಕೊಲೆ ಮಾಡಿರುವ ಘಟನೆ ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದೆ.
ತಮ್ಮ ಮಗುವಿಗೆ ಪತಿ ಮುತ್ತಿಡುವುದನ್ನು ವಿರೋಧಿಸಿದ್ದರಿಂದಾಗಿ ಇಬ್ಬರ ನಡುವೆ ಮಾತಿನ ಚಕಮಕಿ ಶುರುವಾಗಿದೆ. ಇಬ್ಬರ ಮಾತು ಆಕ್ರೋಶಕ್ಕೆ ತಿರುಗಿದ್ದು, ಪತಿ ಅವಿನಾಶ್ ಚಾಕುವಿನಿಂದ ದೀಪಿಕಾ ಮೇಲೆ ಹಲ್ಲೆ ನಡೆಸಿದ್ದಾನೆ.
ಆಕೆಯೆ ಚೀರಾಟ ಕೇಳಿದ ಸ್ಥಳೀಯರು ದೀಪಿಕಾಳ ರಕ್ಷಣೆಗೆ ಧಾವಿಸಿದ್ದಾರೆ. ಕೂಡಲೇ ಆಕೆಯನ್ನು ಪೆರಿಂತಲ್ಮನ್ನಾ ಬಳಿಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ತೀವ್ರ ರಕ್ತಸ್ತಾçವದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸದ್ಯ ಪೊಲೀಸರು ಆರೋಪಿ ಅವಿನಾಶ್‌ನನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಅವಿನಾಶ್ ಎರಡು ತಿಂಗಳ ಹಿಂದೆಯಷ್ಟೇ ಪಾಲಕ್ಕಾಡ್‌ಗೆ ಮರಳಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ರಿಲಯನ್ಸ್‌ ಜಿಯೊದಿಂದ ಹೊರನಡೆದ ಮುಖೇಶ್‌ ಅಂಬಾನಿ; ಪುತ್ರ ಆಕಾಶ್‌ ಮುಖ್ಯಸ್ಥ!