Webdunia - Bharat's app for daily news and videos

Install App

ಕೇರಳ ಸ್ವಪ್ನ ಸುರೇಶ್ ಮಾದರಿಯಲ್ಲೇ ರನ್ಯಾ ರಾವ್ ಹಿಂದೆಯೂ ಪ್ರಭಾವಿಗಳಿದ್ದಾರಾ

Krishnaveni K
ಮಂಗಳವಾರ, 11 ಮಾರ್ಚ್ 2025 (11:16 IST)
Photo Credit: X
ದುಬೈ: ಕೇರಳದಲ್ಲಿ ತೀವ್ರ ಸಂಚಲನ ಮೂಡಿಸಿದ್ದ ಚಿನ್ನ ಕಳ್ಳ ಸಾಗಣಿಕೆ ಕೇಸ್ ನಲ್ಲಿ ಸ್ವಪ್ನ ಸುರೇಶ್ ಎಂಬಾಕೆ ಸಿಕ್ಕಿಬಿದ್ದಿದ್ದರು. ಇದೀಗ ಬೆಂಗಳೂರಿನಲ್ಲಿ ಸಿಕ್ಕಿಬಿದ್ದ ರನ್ಯಾ ರಾವ್ ಹಿಂದೆಯೂ ಪ್ರಭಾವಿಗಳಿದ್ದಾರಾ ಎಂಬ ಅನುಮಾನ ಶುರುವಾಗಿದೆ.

ಕೇರಳದ ರಾಜಕೀಯದಲ್ಲಿ ಸ್ವಪ್ನ ಸುರೇಶ್ ಕೇಸ್ ಭಾರೀ ಕೋಲಾಹಲವೆಬ್ಬಿಸಿತ್ತು. ಈ ಪ್ರಕರಣ ಕೇರಳ ಸರ್ಕಾರಕ್ಕೆ ತೀವ್ರ ಮುಜುಗರವುಂಟು ಮಾಡಿತ್ತು. ಪ್ರಕರಣದಲ್ಲಿ ಕೇರಳ ಸಿಎಂ ಪಿಣರಾಯಿ ವಿಜಯನ್ ಹೆಸರೂ ಕೇಳಿಬಂದಿತ್ತು. ಕೇರಳ ಸಿಎಂ ಪಿಣರಾಯಿ ಒಂದು ಚೀಲದಲ್ಲಿ ನಗದು ಹಣವನ್ನು ಯುಎಇಗೆ ಸಾಗಿಸಿದ್ದರು ಎಂದು ಸ್ವಪ್ನ ಸುರೇಶ್ ಆರೋಪಿಸಿದ್ದರು. ಬಳಿಕ ಸಿಎಂ ವಿರುದ್ಧ ಹೇಳಿಕೆ ನೀಡದಂತೆ ಪಿಣರಾಯಿ ವಿಜಯನ್ ಕೋರ್ಟ್ ಮೊರೆ ಹೋಗಿದ್ದರು.

ಇದೀಗ ರನ್ಯಾ ರಾವ್ ಪ್ರಕರಣದಲ್ಲೂ ಇದೇ ರೀತಿ ಪ್ರಭಾವಿಗಳ ಕೈವಾಡವಿರಬಹುದೇ ಎಂಬ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ. ರನ್ಯಾ ರಾವ್ ಗೂ ಪ್ರಭಾವೀ ರಾಜಕೀಯ ನಾಯಕರ ನಂಟಿತ್ತು ಎಂಬ ಮಾತು ಕೇಳಿಬಂದಿದೆ. ಹೀಗಾಗಿ ಅಧಿಕಾರಿಗಳು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಯಾರೊಬ್ಬರ ಸಹಾಯವೂ ಇಲ್ಲದೇ ರನ್ಯಾ ಇಷ್ಟು ದೊಡ್ಡ ಮೊತ್ತದ ಚಿನ್ನ ಕಳ್ಳಸಾಗಣಿಕೆ ಮಾಡಲು ಸಾಧ್ಯವಿಲ್ಲ. ಅಲ್ಲದೆ ಆಕೆಯೇ ನನಗೆ ಬೆದರಿಸಿ ಈ ಕೆಲಸ ಮಾಡಿಸಲಾಗಿದೆ ಎಂದು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾಳೆ. ಹೀಗಾಗಿ ಈಗ ಆಕೆಯ ಹಿಂದೆ ನಿಂತು ಕೆಲಸ ಮಾಡಿಸಿದವರು ಯಾರು ಎಂಬ ತನಿಖೆ ಶುರುವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mock Drill: ಬೆಂಗಳೂರು ಪೂರ್ತಿ ಲೈಟ್ಸ್ ಆಫ್

Operation Sindoor: ಸೇನೆಗೆ ಭಗವಂತ ಶಕ್ತಿ ತುಂಬಲು ಮುಜರಾಯಿ ದೇವಸ್ಥಾನಗಳಲ್ಲಿ ವಿಶೇಷ ಪೂಜೆ

Operation Sindoor: ಮತ್ತೆ ಬಾಲ ಬಿಚ್ಚಿದ ಪಾಪಿಸ್ತಾನ: ಪ್ರತಿದಾಳಿಗೆ ಸೇನೆಗೆ ಪರಮಾಧಿಕಾರ ನೀಡಿದ ಪಾಕ್‌ ಪ್ರಧಾನಿ

Operation Sindoor: 18 ವಿಮಾನಗಳು ಬಂದ್, 200 ವಿಮಾನಗಳು ರದ್ದು: ವಿಮಾನ ಪ್ರಯಾಣಿಕರು ಈ ಸೂಚನೆ ಗಮನಿಸಿ

ಸಿಂಧೂರರಾಮಯ್ಯನಾದ ಸಿದ್ದರಾಮಯ್ಯ: ಸಿಎಂ ವರಸೆ ಬಗ್ಗೆ ಪ್ರತಾಪ ಸಿಂಹ ಟೀಕೆ

ಮುಂದಿನ ಸುದ್ದಿ
Show comments