Webdunia - Bharat's app for daily news and videos

Install App

ಹಿಂದೂಗಳ ಭಾವನೆ ಧಕ್ಕೆ ತಂದ ಕೇರಳ ಪಠ್ಯ ಪುಸ್ತಕದ ಚಿತ್ರ

Krishnaveni K
ಶನಿವಾರ, 6 ಏಪ್ರಿಲ್ 2024 (15:35 IST)
Photo Courtesy: Twitter
ತಿರುವನಂತಪುರಂ: ಪಠ್ಯ ಪುಸ್ತಕದಲ್ಲಿ ಕೆಲವೊಂದು ತಪ್ಪುಗಳು, ಉದ್ದೇಶಪೂರ್ವಕವಾಗಿ ನಡೆಯುತ್ತದೋ ಇಲ್ಲವೇ ಉದ್ದೇಶಪೂರ್ವಕವಾಗಿರದೇ ಅನಿರೀಕ್ಷಿತವಾಗಿ ನಡೆಯುತ್ತದೋ ಗೊತ್ತಿಲ್ಲ. ಆದರೆ ಹಲವು ಬಾರಿ ಪಠ್ಯ ಪುಸ್ತಕಗಳಲ್ಲಿ ನೀಡುವ ಕೆಲವೊಂದು ವಿಚಾರಗಳು ವಿವಾದಕ್ಕೆ ಕಾರಣವಾಗುವುದು ಇದೆ.

ಇದೀಗ ಕೇರಳದ ಇಂಗ್ಲಿಷ್ ಭಾಷೆಯ ಪಠ್ಯ ಪುಸ್ತಕದಲ್ಲಿ ನೀಡಲಾಗಿರುವ ಕೆಲವೊಂದು ಚಿತ್ರಗಳು ಹಿಂದೂಗಳ ಕೆಂಗಣ್ಣಿಗೆ ಗುರಿಯಾಗಿದೆ. ಕೆಲವರು ಈಗಾಗಲೇ ಸೋಷಿಯಲ್ ಮೀಡಿಯಾ ಮೂಲಕ ಇದರ ಬಗ್ಗೆ ಆಕ್ರೋಶ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಜೊತೆಗೆ ಫೋಟೋಗಳನ್ನೂ ಹಂಚಿಕೊಂಡಿದ್ದಾರೆ.

ಇಂಗ್ಲಿಷ್ ಪಠ್ಯಪುಸ್ತಕದಲ್ಲಿ ಎರಡು ಸಿಹಿ ತಿಂಡಿ ಮಾರುವವ ಚಿತ್ರ ನೀಡಲಾಗಿದೆ. ಈ ಪೈಕಿ ಹಿಂದೂ ಹೆಸರಿರುವ ವ್ಯಕ್ತಿಯ ಅಂಗಡಿ ಸಿಹಿ ತಿನಿಸುಗಳು ನೊಣ ಮುತ್ತಿಕೊಂಡು ಶುಚಿಯಾಗಿಲ್ಲ ಎಂದು ತೋರಿಸಲಾಗಿದೆ. ಮುಸ್ಲಿಂ ವ್ಯಕ್ತಿಯ ಹೆಸರಿರುವ ಚಿತ್ರದಲ್ಲಿ  ಸಿಹಿ ತಿಂಡಿಗಳು ಒಪ್ಪವಾಗಿ ಜೋಡಿಸಿರುವುದಲ್ಲದೆ, ಶುಚಿಯಾಗಿರುವಂತೆ ತೋರಿಸಲಾಗಿದೆ.

ಅದೇ ರೀತಿ ಇನ್ನೊಂದು ಪುಟದಲ್ಲಿ ಹಿಂದೂ ವ್ಯಕ್ತಿಯ ಹೆಸರು ಹಾಕಿ ಆತ ಶುಚಿಯಾಗಿಲ್ಲ. ಮುಸ್ಲಿಂ ವ್ಯಕ್ತಿಯ ಹೆಸರು ಹಾಕಿ ಆತ ಶುಚಿಯಾಗಿರುತ್ತಾನೆ ಎಂದು ವಿವರಿಸಲಾಗಿದೆ. ಈ ಎರಡೂ ಚಿತ್ರಗಳು ಹಿಂದೂಗಳ ಆಕ್ರೋಶಕ್ಕೆ ಕಾರಣವಾಗಿದೆ. ಶುಚಿಯಾಗಿಲ್ಲದಿರುವ ಹೆಸರು ಹಿಂದೂಗಳದ್ದೇ ಯಾಕೆ ಆಗಿರಬೇಕು. ಚಿಕ್ಕ ಮಕ್ಕಳ ಮನಸ್ಸಿನಲ್ಲಿ ಈ ರೀತಿ ಹಿಂದೂಗಳ ಬಗ್ಗೆ ಕೆಟ್ಟ ಭಾವನೆ ಬರುವಂತೆ ಮಾಡುವ ಪ್ರಯತ್ನ ನಡೆಯುತ್ತಿದೆ. ಇದೇ ಕಾರಣಕ್ಕೆ ಕೇರಳ ಲವ್ ಜಿಹಾದ್ ಪ್ರಕರಣದಲ್ಲಿ ನಂ.1 ಸ್ಥಾನದಲ್ಲಿದೆ ಎಂದು ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳ ನರ್ಸ್ ನಿಮಿಷಾ ಪ್ರಿಯಾ ಮರಣದಂಡನೆ ಸಂಪೂರ್ಣವಾಗಿ ರದ್ದು

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Video: ಆಪರೇಷನ್ ಸಿಂಧೂರ್ ಶೌರ್ಯದ ಬಗ್ಗೆ ಹೇಳಿದ್ರೆ ವಿಪಕ್ಷಗಳು ಮೇಜು ತಟ್ಟಲ್ಲ ಯಾಕೆ: ಅನುರಾಗ್ ಠಾಕೂರ್

ಪ್ರೆಗ್ನೆನ್ಸಿಗೆ ಟ್ರೈ ಮಾಡುತ್ತಿದ್ದರೆ ಮಹಿಳೆಯರು ಇದನ್ನು ಗಮನಿಸಬೇಕು ಅಂತಾರೆ ಡಾ ಪದ್ಮಿನಿ ಪ್ರಸಾದ್

ಅಂದು ಮುಖ್ಯಮಂತ್ರಿ ಆಗುವ ಆಸೆ ಈಡೇರಲಿಲ್ಲ ಎಂದು ಈಗ ಈಡೇರಿಸಿಕೊಳ್ತಾರಾ ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments