Kerala Tiger: ಕೇರಳದಲ್ಲಿ ಮಹಿಳೆಯ ತಿಂದು ಹಾಕಿದ ಹುಲಿ ಸತ್ತ ಮೇಲೂ ಕಣ್ಣು ನೋಡಿದರೆ ಭಯವಾಗುವಂತಿದೆ: ವಿಡಿಯೋ

Krishnaveni K
ಸೋಮವಾರ, 27 ಜನವರಿ 2025 (14:01 IST)
Photo Credit: X
ವಯನಾಡು: ಕೇರಳದ ವಯನಾಡಿನಲ್ಲಿ ಮಹಿಳೆಯೊಬ್ಬರನ್ನು ಕೊಂದು ತಿಂದು ಹಾಕಿದ ನರಭಕ್ಷಕ ಹುಲಿ ಈಗ ಸತ್ತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಆದರೆ ಸತ್ತ ಮೇಲೂ ಹುಲಿಯ ಕಣ್ಣು ನೋಡಿದರೆ ಅರೆಕ್ಷಣ ಭಯವಾಗುವಂತಿದೆ.

ಕೇರಳದ ವಯನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಸಾರ್ವಜನಿಕರು ರಾತ್ರಿ ಓಡಾಡಲೂ ಭಯಪಡುವ ಪರಿಸ್ಥಿತಿಯಿತ್ತು. ಇದಕ್ಕೆ ಕಾರಣ ನರಹಂತಕ ಹುಲಿ. ಕಳೆದ ವಾರ ಕಾಫಿ ಪ್ಲ್ಯಾಂಟೇಷನ್ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರನ್ನು ಈ ಹುಲಿ ಕೊಂದು ತಿಂದು ಹಾಕಿತ್ತು.

ಇದರ ಬೆನ್ನಲ್ಲೇ ಜನರಲ್ಲಿ ಭಯಹುಟ್ಟಿತ್ತು. ಹೀಗಾಗಿ ಈ ಹುಲಿಯನ್ನು ಜೀವಂತ ಇಲ್ಲವೇ ಹತ್ಯೆ ಮಾಡಿಯಾದರೂ ಸೆರೆಹಿಡಿಯಬೇಕು ಎಂದು ಅರಣ್ಯಾಧಿಕಾರಿಗಳು ಪಣ ತೊಟ್ಟಿದ್ದರು. ನರಹಂತಕ ಹುಲಿಗಾಗಿ ಹುಡುಕಾಟವೂ ಶುರುವಾಗಿತ್ತು.

ಆದರೆ ಇಂದು ಬೆಳಗಿನ ಜಾವ 2.30 ರ ಸುಮಾರಿಗೆ ಪಿಲಕ್ಕಾವು ಪ್ರದೇಶದಲ್ಲಿ ನರಹಂತಕ ಹುಲಿ ಸಾವಿಗೀಡಾದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಎಲ್ಲಾ ರೀತಿಯ ಔಪಚಾರಿಕತೆ ಮುಗಿಸಿದ ಅರಣ್ಯಾಧಿಕಾರಿಗಳು ಹುಲಿಯ ಮೃತದೇಹವನ್ನು ಬಲೆಯಲ್ಲಿ ಹಾಕಿ ಹೊತ್ತೊಯ್ದಿದ್ದಾರೆ. ವಿಶೇಷವೆಂದರೆ ಸತ್ತ ಮೇಲೂ ಹುಲಿಯ ಹೊಳೆಯುವ ಕಣ್ಣುಗಳು ಭಯಹುಟ್ಟಿಸುವಂತಿತ್ತು. ಈ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಸಿಎಂ ಸ್ಥಾನ ಕೊಡಬೇಕಾ: ಡಿಕೆಶಿ ಭವಿಷ್ಯದ ಅಂತಿಮ ನಿರ್ಧಾರ ಯಾರದ್ದು ಗೊತ್ತಾ

Arecanut Ptice: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಸಿಎಂ ಕುರ್ಚಿ ಪಡೆಯಲು ಡಿಕೆ ಶಿವಕುಮಾರ್ ಬಣದ ಮತ್ತೊಂದು ಪವರ್ ಫುಲ್ ಐಡಿಯಾ

ಖರ್ಗೆ ಸಾಹೇಬ್ರೇ ನೀವು ರಬ್ಬರ್ ಸ್ಟಾಂಪ್ ಅನ್ನೋದಕ್ಕೆ ಇದಕ್ಕಿಂತ ಬೇಕಾ: ಜೆಡಿಎಸ್ ಲೇವಡಿ

ಮುಂದಿನ ಸುದ್ದಿ
Show comments