Webdunia - Bharat's app for daily news and videos

Install App

ಭ್ರಷ್ಟ ಸಚಿವ ಖಾಡ್ಸೆ ರಾಜೀನಾಮೆ: ಮೋದಿ-ಶಾಹ ಜೋಡಿಗೆ ಮೊದಲ ಕಂಟಕ

Webdunia
ಶನಿವಾರ, 4 ಜೂನ್ 2016 (16:46 IST)
ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಪಕ್ಷ ಶೂನ್ಯ ತಾಳ್ಮೆ ಹೊಂದಿದೆ ಎಂದು ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿಗೆ, ಬಿಜೆಪಿ ಸಚಿವ ಏಕನಾಥ್ ಖಾಡ್ಸೆ ಭ್ರಷ್ಟಾಚಾರ ಪ್ರಕರಣ ಕಳಂಕ ತಂದಿದೆ.
 
ಬಿಜೆಪಿಯ ಕೇಂದ್ರ ನಾಯಕತ್ವ ಕೂಡಲೇ ರಾಜೀನಾಮೆ ನೀಡುವಂತೆ ಆದೇಶಿಸಿದ ಹಿನ್ನೆಲೆಯಲ್ಲಿ, ಏಕನಾಥ್ ಖಾಡ್ಸೆ ಇಂದು ಬೆಳಿಗೆ ಮುಖ್ಯಮಂತ್ರಿ ದೇವೇಂದ್ರ ಫಢ್ನವೀಸ್‌ ಅವರಿಗೆ ತಮ್ಮ ರಾಜೀನಾಮೆ ಪತ್ರ ನೀಡಿದ್ದಾರೆ.
 
ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಪ್ರಧಾನಿ ಮೋದಿ ಮತ್ತು ಅಮಿತ್ ಶಾರನ್ನು ಭೇಟಿಯಾಗಿ ಖಾಡ್ಸೆ ವಿರುದ್ಧದ ಆರೋಪಗಳ ಬಗ್ಗೆ ವಿವರಣೆ ನೀಡಿದಾಗಲೇ ಖಾಡ್ಸೆ ರಾಜೀನಾಮೆ ಫೈನಲ್ ಆಗಿತ್ತು ಎನ್ನಲಾಗಿದೆ.
 
ಸಚಿವ ಸಂಪುಟದಲ್ಲಿ ಎರಡನೇ ಪ್ರಭಾವಿ ಸಚಿವರಾಗಿದ್ದ ಖಾಡ್ಸೆ, ಕರಾಚಿಯಿಂದ ದಾವೂದ್ ದೂರವಾಣಿಗಳ ಕರೆ ಬಹಿರಂಗವಾಗಿರುವುದು ಮತ್ತು ಭೂ ಕಬಳಿಕೆ ಸೇರಿದಂತೆ ಸರಣಿ ಹಗರಣಗಳು ಬಹಿರಂಗವಾಗಿದ್ದರಿಂದ ರಾಜೀನಾಮೆ ನೀಡುವುದು ಅನಿವಾರ್ಯವಾಗಿತ್ತು ಎನ್ನಲಾಗಿದೆ. 
 
ಮಹಾರಾಷ್ಟ್ರ ಕೈಗಾರಿಕೆ ಅಭಿವೃದ್ಧಿ ನಿಗಮದಿಂದ 40 ಕೋಟಿ ಬೆಲೆಬಾಳುವ ಮೂರು ಏಕರೆ ಭೂಮಿಯನ್ನು ಕೇವಲ 3,75 ಕೋಟಿಗಳಿಗೆ ಖರೀದಿಸಿ ತಮ್ಮ ಪತ್ನಿ ಮತ್ತು ಅಳಿಯನ ಹೆಸರಿಗೆ ವರ್ಗಾಯಿಸಿದ್ದರು. 
 
ನಿನ್ನೆ ರಾತ್ರಿ ಸುದ್ದಿಗಾರರೊಂದಿಗೆ ಮಾತನಾಡಿದ ಖಾಡ್ಸೆ, ಆಧಾರ ರಹಿತ ಆರೋಪಗಳ ಕುರಿತಂತೆ ಬಿಜೆಪಿ ಕೇಂದ್ರೀಯ ನಾಯಕತ್ವ ಯಾವುದೇ ನಿರ್ದೇಶನ ನೀಡಿಲ್ಲ ಎಂದು ಹೇಳಿಕೆ ನೀಡಿದ್ದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾತೃಪಕ್ಷಕ್ಕೆ ಮೋಸಮಾಡಿದ ಸಿದ್ದರಾಮಯ್ಯನವರು ಹೆತ್ತ ತಾಯಿಗೆ ಮಾಡಿದ ದ್ರೋಹಕ್ಕೆ ಸಮ: ನಿಖಿಲ್ ಕುಮಾರಸ್ವಾಮಿ

ಇರಾನ್ ದಾಳಿ ಬೆನ್ನಲ್ಲೇ ಅಮೆರಿಕ ಪ್ರವಾಸ ಕೈಗೊಂಡ ಇಸ್ರೇಲ್‌ ಪ್ರಧಾನಿ ನೆತನ್ಯಾಹು

ಬೆಲೆ ಏರಿಕೆಯ ಮಧ್ಯೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ ಬೆಲೆ ₹58.50ಕಡಿತ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ಮುಂದಿನ ಸುದ್ದಿ
Show comments