Webdunia - Bharat's app for daily news and videos

Install App

ಮಗು ಕೊಂದು ಅಪಘಾತ ನಾಟಕ ಕಟ್ಟಿದ! ಮುಂದೇನಾಯ್ತು?

Webdunia
ಗುರುವಾರ, 21 ಏಪ್ರಿಲ್ 2022 (14:01 IST)
ಲಾರಿ ಚಾಲಕನಾಗಿದ್ದ ತೂಬಗೆರೆ ದೀಪು, ತನ್ನ ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳ ಜತೆ ಅತ್ತಿಬೆಲೆ ಸಮೀಪದ ನೆಲ್ಲೂರಹಳ್ಳಿಯಲ್ಲಿ ನೆಲೆಸಿದ್ದ.
 
ಮಾ.20ರಂದು ತನ್ನ ನಾದಿನಿಯ ಎರಡೂವರೆ ವರ್ಷದ ಹೆಣ್ಣು ಮಗುವನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕವಾಗಿ ಶೋಷಿಸಿದ್ದ. ಆ ವೇಳೆ ಮಗು ಕೂಗಿಕೊಂಡಿದ್ದಕ್ಕೆ ಕೋಪಗೊಂಡ ದೀಪು, ಮಗುವಿಗೆ ಕಪಾಳಕ್ಕೆ ಹೊಡೆದಿದ್ದ.

ಇದರಿಂದ ಮಗು ಪ್ರಜ್ಞಾಹೀನವಾಯಿತು. ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರೂ ಮಗುವಿನ ಜೀವ ಉಳಿಯಲಿಲ್ಲ. ಆದರೆ, ಚಿಕಿತ್ಸೆ ನೀಡಿದ ವೈದ್ಯರಿಗೆ ಕಾರಿನಲ್ಲಿ ಹೋಗುವಾಗ ಹಂಫ್ಸ್ನಲ್ಲಿ ಬ್ರೇಕ್ ಹಾಕಿದ್ದರಿಂದ ಮಗುವಿಗೆ ಪೆಟ್ಟಾಯಿತು ಎಂದು ಹೇಳಿದ್ದ.

ಈ ಮಾತಿನಿಂದ ಅನುಮಾನಗೊಂಡ ವೈದ್ಯರು, ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅನಂತರ ಮಗುವಿನ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದಾಗ ಸಾವಿಗೂ ಮುನ್ನ ಮಗುವಿನ ಮೇಲೆ ಹಲ್ಲೆ ಹಾಗೂ ಲೈಂಗಿಕ ದೌರ್ಜನ್ಯ ನಡೆದಿದ್ದ ಸಂಗತಿ ಬಯಲಾಯಿತು.

 ಈ ವರದಿ ಆಧರಿಸಿ ಪೊಕ್ಸೋ ಕಾಯ್ದೆ ಹಾಗೂ ಕೊಲೆ ಪ್ರಕರಣ ದಾಖಲಿಸಿಕೊಂಡ ಅತ್ತಿಬೆಲೆ ಪೊಲೀಸರು, ಆರೋಪಿಯನ್ನು ಬಂಧಿಸಿ ಮಾ.28ರಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಬಿಟ್ಟಿದ್ದರು. ಜೈಲಿಗೆ ಬಂದ ಆರೋಪಿಗೆ ಜೈಲು ಆವರಣದಲ್ಲಿ ಕ್ವಾರಂಟೈನ್ ಮಾಡಲಾಗಿತ್ತು.

ತನ್ನ ಕೃತ್ಯದಿಂದ ಪಶ್ಚಾತ್ತಾಪಪಟ್ಟಿದ್ದ ಆತ, ಶನಿವಾರ ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು, ಲೈಂಗಿಕ ದೌರ್ಜನ್ಯ, ಅಪಘಾತ ಲಾರಿ ಚಾಲಕನಾಗಿದ್ದ ತೂಬಗೆರೆ ದೀಪು, ತನ್ನ ಪತ್ನಿ ಮತ್ತು ಮೂವರು ಹೆಣ್ಣು ಮಕ್ಕಳ ಜತೆ ಅತ್ತಿಬೆಲೆ ಸಮೀಪದ ನೆಲ್ಲೂರಹಳ್ಳಿಯಲ್ಲಿ ನೆಲೆಸಿದ್ದ.

ಮಾ.20ರಂದು ತನ್ನ ನಾದಿನಿಯ ಎರಡೂವರೆ ವರ್ಷದ ಹೆಣ್ಣು ಮಗುವನ್ನು ಕಾರಿನಲ್ಲಿ ಕರೆದೊಯ್ದು ಲೈಂಗಿಕವಾಗಿ ಶೋಷಿಸಿದ್ದ. ಆ ವೇಳೆ ಮಗು ಕೂಗಿಕೊಂಡಿದ್ದಕ್ಕೆ ಕೋಪಗೊಂಡ ದೀಪು, ಮಗುವಿಗೆ ಕಪಾಳಕ್ಕೆ ಹೊಡೆದಿದ್ದ.

ಇದರಿಂದ ಮಗು ಪ್ರಜ್ಞಾಹೀನವಾಯಿತು. ಕೂಡಲೇ ಸಮೀಪದ ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದರೂ ಮಗುವಿನ ಜೀವ ಉಳಿಯಲಿಲ್ಲ. ಆದರೆ, ಚಿಕಿತ್ಸೆ ನೀಡಿದ ವೈದ್ಯರಿಗೆ ಕಾರಿನಲ್ಲಿ ಹೋಗುವಾಗ ಹಂಫ್ಸ್ನಲ್ಲಿ ಬ್ರೇಕ್ ಹಾಕಿದ್ದರಿಂದ ಮಗುವಿಗೆ ಪೆಟ್ಟಾಯಿತು ಎಂದು ಹೇಳಿದ್ದ.

ಈ ಮಾತಿನಿಂದ ಅನುಮಾನಗೊಂಡ ವೈದ್ಯರು, ಅತ್ತಿಬೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದರು. ಅನಂತರ ಮಗುವಿನ ಮೃತದೇಹವನ್ನು ಪೊಲೀಸರು ಮರಣೋತ್ತರ ಪರೀಕ್ಷೆ ನಡೆಸಿದಾಗ ಸಾವಿಗೂ ಮುನ್ನ ಮಗುವಿನ ಮೇಲೆ ಹಲ್ಲೆ ಹಾಗೂ ಲೈಂಗಿಕ ದೌರ್ಜನ್ಯ ನಡೆದಿದ್ದ ಸಂಗತಿ ಬಯಲಾಯಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Pehalgam terror attack: ಇಸ್ರೇಲ್ ಬಳಿಕ ಭಾರತಕ್ಕೆ ಬಂದಿಳಿದ ಅಮೆರಿಕಾದ ಯುದ್ಧ ವಿಮಾನ: ಏನಿದರ ಹಿಂದಿನ ಲೆಕ್ಕಾಚಾರ

Mangaluru: ಪಹಲ್ಗಾಮ್ ಉಗ್ರರ ದಾಳಿಯನ್ನು ಸಮರ್ಥಿಸಿ ಫೇಸ್ ಬುಕ್ ನಲ್ಲಿ ಪೋಸ್ಟ್

Gold Price today: ಚಿನ್ನದ ದರ ಇಂದು ಮತ್ತೆ ಏರಿಕೆ, ಎಷ್ಟಾಗಿದೆ ನೋಡಿ

Pehalgam: ಪಹಲ್ಗಾಮ್ ನಲ್ಲಿ ರಕ್ತಪಾತ ಮಾಡಿದ ಉಗ್ರರು ಈಗ ಎಲ್ಲಿದ್ದಾರೆ ಎಂಬುದು ಪತ್ತೆ

Viral Video: ಈ ಮಕ್ಕಳಿಗೆ ಯೋಧರ ಮೇಲೆ ಅದೆಂಥಾ ಗೌರವ ನೀವೇ ವಿಡಿಯೋ ನೋಡಿ

ಮುಂದಿನ ಸುದ್ದಿ