Webdunia - Bharat's app for daily news and videos

Install App

ಗೋಡೆಗೆ ಬಡಿದು ತಾಯಿಯನ್ನೇ ಕೊಂದ!

Webdunia
ಗುರುವಾರ, 17 ಫೆಬ್ರವರಿ 2022 (16:11 IST)
ತಿರುವನಂತಪುರಂ : ವ್ಯಕ್ತಿಯೊಬ್ಬ ತನ್ನ ಸ್ವಂತ ತಾಯಿಯೊಂದಿಗೆ ಜಗಳವಾಡಿ ಕೋಪದಲ್ಲಿ ಗೋಡೆಗೆ ಬಡಿದು ಕೊಂದಿರುವ ಘಟನೆ ಕೊಚ್ಚಿಯ ಮುವಾಟ್ಟುಪುಳದ ಪಲ್ಲಿಚಿರಂಗರಾದಲ್ಲಿ ನಡೆದಿದೆ.
 
ಆರೋಪಿ ಮನೋಜ್(46) ತನ್ನ ತಾಯಿ ಶಾಂತಮ್ಮ ನೆರೆಹೊರೆಯವರ ಮುಂದೆ ತನ್ನ ಬಗ್ಗೆ ಅನಗತ್ಯ ವಿಚಾರಗಳನ್ನು ಹೇಳುತ್ತಿರುತ್ತಾರೆ ಎಂಬ ಕಾರಣಕ್ಕೆ ಜಗಳವಾಡಿ ಹತ್ಯೆ ಮಾಡಿದ್ದಾನೆ. 

ಫೆಬ್ರವರಿ 5 ರ ರಾತ್ರಿ ಮನೋಜ್ ತಾಯಿ ಶಾಂತಮ್ಮ ಅವರ ಮೇಲೆ ಕೋಪಗೊಂಡು ಜಗಳ ಪ್ರಾರಂಭಿಸಿದ್ದಾನೆ. ತಾಯಿ-ಮಗನ ನಡುವಿನ ಜಗಳ ವಿಕೋಪಕ್ಕೆ ತಿರುಗಿತ್ತು. ಕೋಪದ ಭರದಲ್ಲಿ ಮನೋಜ್ ತಾಯಿಯ ಮುಖವನ್ನು ಅಡುಗೆಮನೆ ಗೋಡೆಗೆ ಹೊಡೆದಿದ್ದಾನೆ. ತಾಯಿ ಸಾಯುವವರೆಗೂ ಮುಖಕ್ಕೆ ಹಲ್ಲೆ ಮಾಡಿದ್ದ ಎಂದು ಆರೋಪಿಸಲಾಗಿದೆ.

ಬಳಿಕ ಆರೋಪಿ ಸಾಕ್ಷ್ಯಗಳನ್ನು ನಾಶಪಡಿಸಲು ಯತ್ನಿಸಿದ್ದಾನೆ. ತಾಯಿಯನ್ನು ಕೊಂದ ಬಳಿಕ ಗೋಡೆಗೆ ಅಂಟಿದ್ದ ರಕ್ತದ ಕಲೆಯನ್ನು ಒರೆಸಿ ಸ್ವಚ್ಛಗೊಳಿಸಿದ್ದಾನೆ. ತಾನು ಎಸಗಿರುವ ಕೃತ್ಯ ಯಾರಿಗೂ ತಿಳಿಯಬಾರದೆಂದು ಮರುದಿನ ಬೆಳಗ್ಗೆ ತಾಯಿ ಎದ್ದೇಳುತ್ತಿಲ್ಲ, ಒಂದು ಬಾರಿ ಪರೀಕ್ಷಿಸಿ ಎಂದು ನೆರೆಹೊರೆಯವರನ್ನು ಕರೆದು ಕೇಳಿದ್ದಾನೆ. 

ನೆರೆಹೊರೆಯವರು ಆಕೆಯನ್ನು ಪರೀಕ್ಷಿಸಿದಾಗ ಆಕೆ ಮೃತಪಟ್ಟಿರುವ ವಿಚಾರ ತಿಳಿದುಬಂದಿದೆ. ತಕ್ಷಣ ಘಟನೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

Operation Sindoor: ವಿವಾದಾತ್ಮಕ ಪೋಸ್ಟ್ ಬೆನ್ನಲ್ಲೇ ಗುಜರಾತ್‌ ಕಾಂಗ್ರೆಸ್‌ ನಾಯಕ ರಾಜೇಶ್ ಸೋನಿ ಅರೆಸ್ಟ್‌

ತುಂಡು ಬಟ್ಟೆ ನಮ್ಮ ಸಂಸ್ಕೃತಿಯಲ್ಲ, ನಾನು ಒಪ್ಪಲ್ಲ: ಬಿಜೆಪಿ ನಾಯಕ ಕೈಲಾಶ್‌

Bengaluru Stampede, ಡಿಸಿಎಂ ಕ್ರೆಡಿಟ್ ಪಡೆಯಲು ಹೋಗಿ ಈ ಅನಾಹುತ ನಡೆದಿದೆ: ನಿಖಿಲ್ ಕುಮಾರಸ್ವಾಮಿ

Govindraj: ವಿಧಾನಸೌಧದಲ್ಲಿ ಆರ್ ಸಿಬಿ ಕಾರ್ಯಕ್ರಮ ಮಾಡಲು ಒತ್ತಡ ಹೇರಿದ್ದೇ ಇವರು

ಮುಂದಿನ ಸುದ್ದಿ
Show comments