Webdunia - Bharat's app for daily news and videos

Install App

ಎಣ್ಣೆ ಕುಡಿಯಲು ಹಣ ಕೊಟ್ಟಿಲ್ಲವೆಂದು ಗರ್ಭಿಣಿ ಪತ್ನಿಯನ್ನು ಕೊಂದ!

Webdunia
ಭಾನುವಾರ, 16 ಜನವರಿ 2022 (10:31 IST)
ರಾಂಚಿ : ಮದ್ಯ ಖರೀದಿಸಲು ಹಣ ಕೊಡದ ಗರ್ಭಿಣಿ ಪತ್ನಿಯನ್ನು ಪತಿ ಕತ್ತು ಹಿಸುಕಿ ಕೊಂದಿರುವ ಘಟನೆ ಜಾರ್ಖಂಡ್ನ ಛತ್ರಾ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ.

ಪ್ರಿಯಾ ದೇವಿ ಮೃತಳಾಗಿದ್ದಾಳೆ. ತಿಲೇಶ್ವರ ಗಂಜು ಆರೋಪಿ ಪತಿಯಾಗಿದ್ದಾನೆ. ತಿಲೇಶ್ವರ್ ಕಳೆದ ವರ್ಷ ಮೇ 25ರಂದು ಪ್ರಿಯಾ ದೇವಿಯನ್ನು ಮದುವೆಯಾಗಿದ್ದ. ಕುಡಿತದ ಚಟಕ್ಕೆ ಬಿದ್ದ ಈತ ಹಣಕ್ಕಾಗಿ ಪತ್ನಿಯನ್ನು ಕೊಲೆ ಮಾಡಿದ್ದಾನೆ. 

ಕಂಠ ಪೂರ್ತಿ ಕುಡಿದು ಬರುತ್ತಿದ್ದ ತಲೇಶ್ವರ ಪ್ರಿಯಾ ಗರ್ಭಿಣಿ ಎನ್ನುವುದು ಲೆಕ್ಕಿಸದೇ ಹೊಡೆದು ಹಿಂಸೆ ಮಾಡುತ್ತಿದ್ದನು. ಇದೇ ವಿಚಾರವಾಗಿ ಇಬ್ಬರ ನಡುವೆ ನಡೆದ ಜಗಳ ಪ್ರಿಯಾ ಪ್ರಾಣವನ್ನು ತೆಗೆದಿದೆ. 

ಒಂದು ದಿನ ತಿಲೇಶ್ವರ ಪತ್ನಿ ಬಳಿ ಮದ್ಯ ಖರೀದಿ ಮಾಡಲು ಹಣ ಕೇಳಿದ್ದಾನೆ. ಆದರೆ ಆಕೆ ಹಣ ಕೊಡಲು ನಿರಾಕರಿಸಿದ್ದಾಳೆ. ಆಗ ಮನಬಂದಂತೆ ಆಕೆಗೆ ಹೊಡೆದು ಕತ್ತು ಹಿಸುಕಿ ಕೊಂದಿದ್ದಾನೆ. ಪ್ರಿಯಾ 7 ತಿಂಗಳ ಗರ್ಭಿಣಿಯಾಗಿದ್ದಳು. ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಿಳೆಯ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments