ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ ಎಂದು ತಂದೆಯನ್ನೇ ಕೊಂದ!

Webdunia
ಗುರುವಾರ, 7 ಏಪ್ರಿಲ್ 2022 (10:32 IST)
ಭೋಪಾಲ್ : ತಾನು 10ನೇ ತರಗತಿ ಪರೀಕ್ಷೆಯಲ್ಲಿ ಫೇಲ್ ಆಗುತ್ತೇನೆ. ಇದರಿಂದ ನನ್ನ ತಂದೆ ಥಳಿಸುತ್ತಾರೆ ಎಂಬ ಭಯದಿಂದ 15 ವರ್ಷದ ಬಾಲಕ ತಂದೆಯನ್ನೇ ಕೊಂದಿರುವ ಘಟನೆ ಮಧ್ಯಪ್ರದೇಶದ ಗುನಾದಲ್ಲಿ ನಡೆದಿದೆ.

ಮೃತ ದುರ್ದೈವಿಯನ್ನು ದುಲಿಚಂದ್ ಅಹಿರ್ವಾರ್ ಎಂದು ಗುರುತಿಸಲಾಗಿದ್ದು, ಏಪ್ರಿಲ್ 3 ರಂದು ಕೋಣೆಯಲ್ಲಿ ಮಲಗಿದ್ದಾಗ ದುಲಿಚಂದ್ ಅಹಿರ್ವಾರ್ ಅವರನ್ನು ಬಾಲಕ ಕೊಡಲಿಯಿಂದ ಕೊಚ್ಚಿ ಹತ್ಯೆಗೈದಿದ್ದಾನೆ. ನಂತರ ಘಟನಾ ಸ್ಥಳದಿಂದ ಬಾಲಕ ಪರಾರಿಯಾಗುತ್ತಿರುವುದನ್ನು ನೆರೆಮನೆಯ ವೀರೇಂದ್ರ ಅಹಿರ್ವಾರ್ ಮತ್ತು ಇನ್ನೋರ್ವ ವ್ಯಕ್ತಿ ಗಮನಿಸಿದ್ದಾರೆ.

ಬಳಿಕ ಘಟನೆ ಕುರಿತಂತೆ ಪೊಲೀಸರು ನೆರೆಯವರನ್ನು ವಿಚಾರಿಸಿದಾಗ ವೀರೇಂದ್ರ ಅವರು ಬಾಲಕನ ಬಗ್ಗೆ ಮಾಹಿತಿ ನೀಡಿದ್ದು, ಬಾಲಕನನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ಈ ವೇಳೆ 10ನೇ ತರಗತಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದರೆ ಮನೆಯಿಂದ ಹೊರಗೆ ಹಾಕುವುದಾಗಿ ತನ್ನ ತಂದೆ ಬೆದರಿಕೆ ಹಾಕಿದ್ದರು, ಅಲ್ಲದೇ ಓದಿಲ್ಲ ಅಂದರೆ ಗದರಿಸುತ್ತಿದ್ದರು ಎಂದು ಬಾಲಕ ಹೇಳಿದ್ದಾನೆ. 

ಈ ಬಾರಿ ಪರೀಕ್ಷೆ ವೇಳೆ ಓದಿರಲಿಲ್ಲ ಮತ್ತು ಪರೀಕ್ಷೆಗಾಗಿ ಸರಿಯಾಗಿ ತಯಾರಿ ನಡೆಸಿರಲಿಲ್ಲ. ಹೀಗಾಗಿ ಫೇಲ್ ಆಗುತ್ತೇನೆ ಎಂಬ ಭಯವಿದ್ದರಿಂದ ತಂದೆಯನ್ನು ಕೊಲ್ಲಲು ನಿರ್ಧರಿಸಿದ್ದಾಗಿ ಸತ್ಯ ಬಹಿರಂಗಪಡಿಸಿದ್ದಾನೆ. ಇದೀಗ ಬಾಲಕನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅಲ್ಲಿಂದ ಬಾಲಾಪರಾಧಿಗೃಹಕ್ಕೆ ಕಳುಹಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ನಿತೀಶ್ ಕುಮಾರ್ ಪದೇ ಪದೇ ಮೋದಿ ಕಾಲಿಗೆ ಬೀಳೋದ್ಯಾಕೆ: ವಿಡಿಯೋ ನೋಡಿ ಕೆಲವರಿಗೆ ಉರಿ

ಬೆಂಗಳೂರು ದರೋಡೆ ಪ್ರಕರಣ: ಪೊಲೀಸರ ಕಣ್ತಪ್ಪಿಸಲು ಕಳ್ಳರ ಖತರ್ನಾಕ್ ಪ್ಲ್ಯಾನ್ ಬಹಿರಂಗ

ಬಾಹ್ಯಾಕಾಶದಿಂದ ಬರೋದು ಸುಲಭ: ಪ್ರಿಯಾಂಕ್ ಖರ್ಗೆ ಎದುರದಲ್ಲೇ ಬೆಂಗಳೂರು ರಸ್ತೆ ಕಿಚಾಯಸಿದ ಶುಭಾಂಶು ಶುಕ್ಲ

ಮುಂದಿನ ಸುದ್ದಿ
Show comments