Webdunia - Bharat's app for daily news and videos

Install App

ಪತ್ನಿಯನ್ನ ಕೊಂದು ಬಾತ್‍ರೂಮ್‍ನಲ್ಲಿ ಬಚ್ಚಿಟ್ಟ ಪತಿ!

Webdunia
ಸೋಮವಾರ, 20 ಜೂನ್ 2022 (09:15 IST)
ನವದೆಹಲಿ : ಪತಿಯೋರ್ವ ಮಕ್ಕಳನ್ನು ನೋಡಿಕೊಳ್ಳಲು ಆಗುತ್ತಿಲ್ಲವೆಂದು ಪತ್ನಿಯನ್ನ ಕೊಲೆ ಮಾಡಿ ಶವವನ್ನು ಬಾತ್ರೂಮ್ನಲ್ಲಿ ಬಚ್ಚಿಟ್ಟ ಘಟನೆ ದೆಹಲಿಯಲ್ಲಿ ನಡೆದಿದೆ.
 
ದೆಹಲಿಯ ಕಪಿಲ್ ವಿಹಾರ್ ನಿವಾಸಿ ವಿಜಯ್(38) ಜೂನ್ 18 ರಂದು ಭಾಲ್ಸ್ವಾ ಡೈರಿ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ತನ್ನ ಪತ್ನಿಯನ್ನು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಈ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣದ ಕುರಿತು ತನಿಖೆ ಮಾಡಿದ್ದಾರೆ.

ಪರಿಶೀಲನೆ ವೇಳೆ ಬಾತ್ರೂಮ್ ಒಳಗೆ ಬಟ್ಟೆಯಲ್ಲಿ ಸುತ್ತಿದ್ದ ಮೃತ ಸಂತೋಷಿದೇವಿ ದೇಹ ಪತ್ತೆಯಾಗಿದೆ. ಈ ಹಿನ್ನೆಲೆ ಪ್ರಕರಣ ದಾಖಲಾಗಿದ್ದು, ಆರೋಪಿ ವಿಜಯ್ನನ್ನು ಬಂಧಿಸಲಾಗಿದೆ. 

ವಿಜಯ್ಗೆ ಈ ಹಿಂದೆ ಬೇರೊಂದು ಮಹಿಳೆ ಜೊತೆ ವಿವಾಹವಾಗಿದ್ದು, ಆತನಿಗೆ 4 ಮಕ್ಕಳಿದ್ದರು. ಆದರೆ ಮೊದಲ ಹೆಂಡತಿ ಅವನಿಂದ ಬೇರೆಯಾಗಿದ್ದಳು. ಈ ವೇಳೆ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಸಂತೋಷಿದೇವಿಯನ್ನು ವಿಜಯ್ ಭೇಟಿಯಾಗಿದ್ದು, ನಂತರ ಅದು ಪ್ರೇಮಕ್ಕೆ ತಿರುಗಿಕೊಂಡಿದೆ.

ಸಂತೋಷಿಗೂ 4 ಮಕ್ಕಳಿದ್ದು 14, 13 ಮತ್ತು 12 ವರ್ಷದ ಮೂವರು ಹುಡುಗಿಯರು ಮತ್ತು 8 ವರ್ಷದ ಒಬ್ಬ ಗಂಡು ಮಗುವಿದೆ. ಆಕೆಯೂ ಪತಿಯಿಂದ ಬೇರ್ಪಟ್ಟು ಒಂಟಿಯಾಗಿ ಜೀವನ ನಡೆಸುತ್ತಿದ್ದಳು.

ಈ ಮಧ್ಯೆ ವಿಜಯ್ ಮತ್ತು ಸಂತೋಷಿ ಒಟ್ಟಿಗೆ ವಾಸಿಸಲು ಪ್ರಾರಂಭಿಸಿದರು. ಇವರಿಬ್ಬರು ಒಂದು ಮಗುವನ್ನು ಸಹ ಹೊಂದಿದ್ದರು. ನಂತರ ಎಲ್ಲ ಮಕ್ಕಳ ಆರೈಕೆಗೆ ಸಂಬಂಧಿಸಿದಂತೆ ವಿಜಯ್ ಮತ್ತು ಸಂತೋಷಿ ನಡುವೆ ಕೆಲವು ಸಣ್ಣ-ಪುಟ್ಟ ಸಮಸ್ಯೆಗಳು ಕಾಣಿಸಿಕೊಳ್ಳಲು ಪ್ರಾರಂಭವಾಯಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore murder: ಹನಿಮೂನ್ ನಲ್ಲೇ ಗಂಡನಿಗೆ ಚಟ್ಟ ಕಟ್ಟಿದಳು: ಇಂಧೋರ್ ನಲ್ಲಿ ಪತ್ನಿಯ ಚಿಲ್ಲಿಂಗ್ ಮರ್ಡರ್ ಕತೆ

Siddaramaiah: ಕಮಿಷನರ್ ಭದ್ರತೆ ಕೊಡ್ಬೇಕಿತ್ತು, ನಂದೇನು ತಪ್ಪಿದೆ ಎಂದ ಸಿಎಂ: ಆರ್ಡರ್ ಕೊಟ್ಟಿದ್ದು ನೀವಲ್ವಾ ಎಂದ ಪಬ್ಲಿಕ್

Karnataka Weather: ಇಂದಿನಿಂದ ಈ ಜಿಲ್ಲೆಗಳಿಗೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಮುಂದಿನ ಸುದ್ದಿ
Show comments