ಕೊಚ್ಚಿಯ ಸೌಮ್ಯಾ ರೇಪ್ ಆ್ಯಂಡ್ ಮರ್ಡರ್ ಆರೋಪಿ ಜೈಲಿನಿಂದ ತಪ್ಪಿಸಿ, ಬಾವಿಯಲ್ಲಿ ಅವಿತಿದ್ದ ಕಾಮುಕ

Sampriya
ಶುಕ್ರವಾರ, 25 ಜುಲೈ 2025 (15:42 IST)
Photo Credit X
ಕೇರಳ: ಕೊಚ್ಚಿಯ ಸೌಮ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಅಪರಾಧಿ ಜೈಲಿನಿಂದ ಪರಾರಿಯಾಗಿ ಬಾವಿಯೊಳಗೆ ಅವಿತು ಕೂತ ಘಟನೆ ನಡೆದಿದೆ. 

ಸೌಮ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಅಪರಾಧಿ ಗೋವಿಂದಚಾಮಿ ಜೈಲಿನಿಂದ ಎಸ್ಕೇಪ್ ಆಗುವ ಮೂಲಕ 2011 ರ ಅಪರಾಧವನ್ನು ಮತ್ತೊಮ್ಮೆ ಗಮನಕ್ಕೆ ಬಂದಿದೆ. 

ಬೆಳಗಿನ ಜಾವ ತಪಾಸಣೆ ನಡೆಸುತ್ತಿದ್ದಾಗ ಜೈಲು ಅಧಿಕಾರಿಗಳಿಗೆ ಗೋವಿಂದಚಾಮಿ ನಾಪತ್ತೆಯಾಗಿರುವುದು ಕಂಡು ಬಂದಿದೆ. ಜೈಲು ಅಧಿಕಾರಿಗಳು ತಕ್ಷಣ ಜೈಲು ಆವರಣದ ಸುತ್ತಮುತ್ತ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಆದರೆ, ಆತ ಎಲ್ಲಿಯೂ ಪತ್ತೆಯಾಗಲಿಲ್ಲ. ಸಿಸಿಟಿವಿ ದೃಶ್ಯವಾಳಿಗಳನ್ನು ಪರಿಶೀಲಿಸಿದಾಗ ಎಸ್ಕೇಪ್ ಆಗಿ ಹೊರಗಡೆ ಹೋಗುತ್ತಿರುವ ದೃಶ್ಯಗಳು ಸೆರೆಯಾಗಿದೆ. ಪೊಲೀಸರು ತೀವ್ರ ಹುಟುಕಾಟ ನಡೆಸಿದಾಗ ಬಾವಿಯೊಳಗೆ ಅಡಗಿ ಕುಳಿತಿದ್ದಾನೆ. 

ತಪ್ಪಿಸಿಕೊಳ್ಳುವ ಪ್ರಯತ್ನವು ಕೇರಳದ ಅತ್ಯಂತ ಭದ್ರವಾದ ಜೈಲುಗಳಲ್ಲಿ ಭದ್ರತಾ ಲೋಪಗಳ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

ಗೋವಿಂದರಾಜು 2011ರ ಫೆಬ್ರವರಿ 1ರಂದು ಕೊಚ್ಚಿಯ ಶಾಪಿಂಗ್ ಮಾಲ್‌ನಲ್ಲಿ ಕೆಲಸ ಮಾಡುತ್ತಿದ್ದ 23 ವರ್ಷದ ಸೇಲ್ಸ್ ಅಸಿಸ್ಟೆಂಟ್ ಸೌಮ್ಯಾ, ಎರ್ನಾಕುಲಂನಿಂದ ಶೋರನೂರ್‌ಗೆ ರೈಲಿನ ಮಹಿಳಾ ವಿಭಾಗದಲ್ಲಿ ಒಬ್ಬಂಟಿಯಾಗಿ ಪ್ರಯಾಣಿಸುತ್ತಿದ್ದರು.

ಪ್ರಯಾಣದ ವೇಳೆ ಗೋವಿಂದಚಾಮಿ ಆಕೆ ಇರುವ ಕೋಚ್‌ಗೆ ನುಗ್ಗಿ ಆಕೆಯ ಮೇಲೆ ಹಲ್ಲೆ ನಡೆಸಿ ವಲ್ಲತ್ತೋಲ್ ನಗರ ನಿಲ್ದಾಣದ ಬಳಿ ಚಲಿಸುತ್ತಿದ್ದ ರೈಲಿನಿಂದ ಹೊರಗೆ ತಳ್ಳಿದ್ದಾನೆ.

ನಂತರ ನಡೆದದ್ದು ಇನ್ನಷ್ಟು ಭಯಾನಕವಾಗಿತ್ತು. ಮನೋರಮಾ ಆನ್‌ಲೈನ್ ಪ್ರಕಾರ, ಗೋವಿಂದಚಾಮಿ ರೈಲಿನಿಂದ ಹಾರಿ, ಗಾಯಗೊಂಡ ಮಹಿಳೆ ಹಳಿಗಳ ಮೇಲೆ ಬಿದ್ದಿರುವುದನ್ನು ಕಂಡು ಮತ್ತೊಂದು ರೈಲು ಮಾರ್ಗದ ಬಳಿ ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾನೆ. ಹಲ್ಲೆ ನಡೆಸಿದ ಬಳಿಕ ಆಕೆಯ ಮೊಬೈಲ್ ಫೋನ್ ಹಾಗೂ ಪರ್ಸ್ ನಲ್ಲಿದ್ದ ನಗದು ಕದ್ದು ಪರಾರಿಯಾಗಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Andhrapradesh Temple Stampede: ಈ ಅಂಶಗಳು ಶ್ರೀಕಾಕುಳಂ ಕಾಲ್ತುಳಿತಕ್ಕೆ ಕಾರಣವಾಯಿತೇ

ಡಿಕೆ ಶಿವಕುಮಾರ್‌ಗೆ ಮುಖ್ಯಮಂತ್ರಿಗಾದಿ ಕುರಿತು ಸಿದ್ದು ಆಪ್ತ ಭೈರತಿ ಸುರೇಶ್ ಸ್ಫೋಟಕ ಹೇಳಿಕೆ

ಶ್ರೀಕಾಕುಳಂ ಕಾಲ್ತುಳಿತ ಶಾಕಿಂಗ್ ದುರ್ಘಟನೆ: ಕೆ ಕವಿತಾ

ನನ್ನ ಮಾತು ಕೇಳ್ತಿದ್ರೆ ಯಡಿಯೂರಪ್ಪ ಜೈಲಿಗೆ ಹೋಗ್ತಿರ್ಲಿಲ್ಲ: ಜಮೀರ್‌ ಅಹಮದ್ ಖಾನ್

ಗ್ಯಾರಂಟಿಗಳಿಂದ ಅನುದಾನ ಸಿಕ್ತಿಲ್ಲ, ಶಾಸಕರು ಕಾಲಿಗೆ ಬೀಳ್ತಿದ್ದಾರೆ: ಜಮೀರ್ ಅಹ್ಮದ್

ಮುಂದಿನ ಸುದ್ದಿ
Show comments