Select Your Language

Notifications

webdunia
webdunia
webdunia
webdunia

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ರೇಪ್‌ ನಡೆದಿಲ್ಲ: ಸಿಬಿಐ ಸ್ಪಷ್ಟನೆ

ಕೋಲ್ಕತಾ ವೈದ್ಯ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ರೇಪ್‌ ನಡೆದಿಲ್ಲ: ಸಿಬಿಐ ಸ್ಪಷ್ಟನೆ

Sampriya

ಕೋಲ್ಕತಾ , ಶುಕ್ರವಾರ, 6 ಸೆಪ್ಟಂಬರ್ 2024 (14:28 IST)
ಕೋಲ್ಕತಾ: ಪಶ್ಚಿಮ ಬಂಗಾಳದ ಆರ್.ಜಿ. ಕರ್ ಆಸ್ಪತ್ರೆಯಲ್ಲಿ ನಡೆದ ವೈದ್ಯ ವಿದ್ಯಾರ್ಥಿನಿ ಮೇಲಿನ ಪ್ರಕರಣ ತಿರುವು ಪಡೆದಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳವು ವೈದ್ಯೆಯ ಸಾವಿನಲ್ಲಿ ಸಾಮೂಹಿಕ ಅತ್ಯಾಚಾರ ಆರೋಪ ತಳ್ಳಿಹಾಕಿದೆ.

ಲಭ್ಯವಿರುವ ಪುರಾವೆಗಳ ಆಧಾರದಲ್ಲಿ ಸಂಜಯ್ ರಾಯ್ ಎಂಬಾತನನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ. ಆತ ಮಾತ್ರ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ನಡೆದ ಭೀಕರ ಅತ್ಯಾಚಾರ ಮತ್ತು ಕೊಲೆಯಲ್ಲಿ ಭಾಗಿಯಾಗಿದ್ದಾನೆ ಎಂದು ಸಿಬಿಐ ಮೂಲಗಳು ತಿಳಿಸಿವೆ.

ಈ ಪ್ರಕರಣದ ತನಿಖೆಯು ಅಂತಿಮ ಹಂತದಲ್ಲಿದೆ ಎಂದು ಮೂಲಗಳು ತಿಳಿಸಿದ್ದು, ಶೀಘ್ರದಲ್ಲೇ ತಮ್ಮ ವರದಿ ಮತ್ತು ಚಾರ್ಜ್ ಶೀಟ್ ದಾಖಲಿಸಲು ಸಿಬಿಐ ಸಿದ್ಧತೆ ನಡೆಸಿದೆ.

ಈ ಪ್ರಕರಣವನ್ನು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ವಹಿಸಿತ್ತು. ಅಲ್ಲದೆ ಪ್ರಕರಣದಲ್ಲಿನ ತನಿಖಾ ವಿಳಂಬದ ಕುರಿತು ಪಶ್ಚಿಮ ಬಂಗಾಳದ ಮಮತಾ ಬ್ಯಾನರ್ಜಿ ಸರ್ಕಾರ ಮತ್ತು ಪೊಲೀಸ್ ಇಲಾಖೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಬುಕ್ಕಿಂಗ್‌ ರದ್ದು ಮಾಡಿದ್ದಕ್ಕೇ ಮಹಿಳೆ ಮೇಲೆ ಹಲ್ಲೆ: ಆಟೋ ಚಾಲಕ ಪೊಲೀಸ್‌ ವಶಕ್ಕೆ