ಲೋಕಾಯುಕ್ತ ಕಚೇರಿಯಲ್ಲಿ ಕೋಟಿ ಕುಬೇರ ಮಾಡಾಳ್ ವಾಸ್ತವ್ಯ!

Webdunia
ಮಂಗಳವಾರ, 28 ಮಾರ್ಚ್ 2023 (10:20 IST)
ಬೆಂಗಳೂರು : ನೂರಾರು ಎಕರೆ ಜಮೀನಿನ ಒಡೆಯ, ಐಷಾರಾಮಿ ಮನೆಯಲ್ಲಿ ಬದುಕ್ತಿದ್ದ ಶಾಸಕ ಮಾಡಾಳ್ ಲೋಕಾಯುಕ್ತ ಕಚೇರಿಯಲ್ಲಿ ವಾಸ್ತವ್ಯ ಕಳೆಯಬೇಕಿದೆ. ಲೋಕಾ ಪೊಲೀಸರು ಕ್ಯಾತಸಂದ್ರ ಬಳಿ ಅರೆಸ್ಟ್ ಬೆನ್ನಲ್ಲೇ ಮಾಡಾಳ್ ರನ್ನ ಲೋಕಾ ಕಚೇರಿಗೆ ಕರೆತಂದ ಬಳಿಕ ತನಿಖಾಧಿಕಾರಿ ಆಂಥೋನಿ ಜಾನ್ ಕೆಲ ಹೊತ್ತು ವಿಚಾರಣೆ ನಡೆಸಿದ್ದಾರೆ.
 
ಆ ಬಳಿಕ ವಿಶ್ರಾಂತಿ ಮಾಡಲು ಸೂಚಿಸಿದ್ದು, ಮಲಗಲು ಹಾಸಿಗೆ ದಿಂಬಿನ ವ್ಯವಸ್ಥೆ ಮಾಡಿದ್ದಾರೆ. ಮಂಗಳವಾರ ಮಧ್ಯಾಹ್ನದ ವೇಳೆಗೆ ಮಾಡಾಳ್ ರನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಕೇಳಲು ಲೋಕಾ ಪೊಲೀಸರು ವಿಚಾರಣೆ ನಡೆಸಲಿದ್ದಾರೆ.

ವಯೋಸಹಜ ಕಾಯಿಲೆಗಳ ಜೊತೆಗೆ ಹಾರ್ಟ್ ಪ್ರಾಬ್ಲಂ ಇರೋದ್ರಿಂದ ರಾತ್ರಿ ಕಣ್ಣಿಟ್ಟು ಕಾಯುವಂತೆ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ ಎನ್ನಲಾಗಿದೆ. ಏನಾದ್ರು ತೊಂದರೆ ಆದಲ್ಲಿ ಕೂಡಲೆ ತಿಳಿಸುವಂತೆ ಸೂಚಿಸಿದ್ದು, ತಡರಾತ್ರಿ ನಂತ್ರ ಮಾಡಾಳ್ ನಿದ್ದೆಗೆ ಜಾರಿದ್ದು, ಇಂದಿನಿಂದ ಅಧಿಕೃತವಾಗಿ 8 ಕೋಟಿ ಹಣದ ಮೂಲದ ವಿಚಾರಣೆ ಆರಂಭವಾಗಲಿದೆ. 

ಲೋಕಾಯುಕ್ತ ಟ್ರ್ಯಾಪ್ ಹಾಗೂ ರೇಡ್ ವೇಳೆ ಕಚೇರಿ ಹಾಗೂ ಮನೆಯಲ್ಲಿ ಸಿಕ್ಕ 8 ಕೋಟಿ ಹಣದ ಸಂಬಂಧ ಕೊನೆಗೂ ಬಿಜೆಪಿಯ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅರೆಸ್ಟ್ ಆಗಿದ್ದಾರೆ. ಹೈಕೋರ್ಟ್ ನಿಂದ ನಿರೀಕ್ಷಣಾ ಜಾಮೀನು ರದ್ದಾದ ಬೆನ್ನಲ್ಲೆ ಲೋಕಾ ಪೊಲೀಸ್ರು ಮಾಡಾಳ್ ಗಾಗಿ ಹುಡುಕಾಟ ಆರಂಭಿಸಿದ್ದರು. ಬೆಂಗಳೂರು ಕಡೆ ಬರುತ್ತಿದ್ದ ಮಾಡಾಳ್ ರನ್ನ ತುಮಕೂರಿನ ಕ್ಯಾತಸಂದ್ರ ಟೋಲ್ ಬಳಿ ಸಂಜೆ 7 ಗಂಟೆ ವೇಳೆಗೆ ನಡುರಸ್ತೆಯಲ್ಲೇ ಅರೆಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರೈತನ ಕೊಂದು ತೊಡೆ, ತಲೆ ಭಾಗ ತಿಂದು ಹಾಕಿದ ಹುಲಿ, ಮೈಸೂರಿನಲ್ಲಿ ವ್ಯಾಘ್ರ ದಾಳಿಗೆ ಮೂರು ಬಲಿ

ದಿಢೀರನೇ ತುಮಕೂರು ಪ್ರವಾಸವನ್ನು ರದ್ದು ಮಾಡಿದ ಸಿಎಂ, ಇದೇ ಕಾರಣ

ಪ್ರಧಾನಿಗೆ ಸಿಎಂ ಪತ್ರ ಬರೆದಿರುವ ಹಿಂದಿನ ಗುಟ್ಟು ಬಿಚ್ಚಿಟ್ಟ ಎಚ್ ಡಿ ಕುಮಾರಸ್ವಾಮಿ

ಬೀದಿ ನಾಯಿ ವಿಚಾರವಾಗಿ ಮಹತ್ವದ ಆದೇಶ ಹೊರಡಿಸಿದ ಸುಪ್ರೀಂ ಕೋರ್ಟ್‌

ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಲಾಠಿ ಚಾರ್ಜ್: ಪೊಲೀಸರ ಮೇಲೆ ಕಲ್ಲು ತೂರಾಟ

ಮುಂದಿನ ಸುದ್ದಿ
Show comments