Webdunia - Bharat's app for daily news and videos

Install App

ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿನ ನನ್ನ ಭಾಷಣ ಕೋವಿಡ್, ಭಯೋತ್ಪಾದನೆ ನಿಗ್ರಹವನ್ನು ಕೇಂದ್ರೀಕರಿಸಲಿದೆ: ಮೋದಿ

Webdunia
ಬುಧವಾರ, 22 ಸೆಪ್ಟಂಬರ್ 2021 (12:55 IST)
ನವದೆಹಲಿ : ಭಾರತ-ಅಮೆರಿಕಾ ರಾಷ್ಟ್ರದ ಸಮಗ್ರ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಯನ್ನು ಬಲಪಡಿಸಲು ಮತ್ತು ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗಿನ ಬಾಂಧವ್ಯವನ್ನು ಬಲಪಡಿಸಲು ಅಮೇರಿಕಾ ಭೇಟಿಯು ಒಂದು ಉತ್ತಮ ಸಂದರ್ಭವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಹೇಳಿದ್ದಾರೆ.

ಬೈಡೆನ್ ಅಮೆರಿಕಾ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಅಮೆರಿಕಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಅಮೆರಿಕಾಕ್ಕೆ ಹೊರಡಲಿರುವ ಮೋದಿಯವರು, ಕ್ವಾಡ್ ಶೃಂಗ ಸಮ್ಮೇಳನ, ವಿಶ್ವಸಂಸ್ಥೆ 76ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಜೋ ಬೈಡೆನ್ ಜತೆ ದ್ವಿಪಕ್ಷೀಯ ಮಾತುಕತೆಯನ್ನೂ ನಡೆಸಲಿದ್ದಾರೆ. ಹೀಗಾಗಿ ಮೋದಿ-ಬೈಡೆನ್ ಭೇಟಿ ಮಹತ್ವ ಪಡೆದುಕೊಂಡಿದೆ.
ಇದರಂತೆ ಇಂದು ಅಮೆರಿಕಾಗೆ ತೆರಳುವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಕೋವಿಡ್ -19 ಸಾಂಕ್ರಾಮಿಕ, ಭಯೋತ್ಪಾದನೆ ನಿಗ್ರಹ, ಹವಾಮಾನ ಬದಲಾವಣೆ ಮತ್ತು ಇತರ ಪ್ರಮುಖ ವಿಚಾರಗಳನ್ನು ಕೇಂದ್ರೀಕರಿಸಿ ಭಾಷಣ ಮಾಡುವ ಮೂಲಕ ಭೇಟಿಯನ್ನು ಮುಕ್ತಾಯಗೊಳಿಸಲಿದ್ದೇನೆಂದು ಹೇಳಿದ್ದಾರೆ.
ಅಮೇರಿಕಾ ಸಂಯುಕ್ತ ಸಂಸ್ಥಾನದ ಅತ್ಯುನ್ನತ ಅಧ್ಯಕ್ಷ ಜೋ ಬಿಡೆನ್ ಅವರ ಆಹ್ವಾನದ ಮೇರೆಗೆ 22-25 ಸೆಪ್ಟೆಂಬರ್ ರಂದು ಅಮೆರಿಕಾಗೆ ಭೇಟಿ ನೀಡುತ್ತೇನೆ. ಭೇಟಿ ವೇಳೆ ಗ್ಲೋಬಲ್ ಪಾರ್ಟನರ್ಶಿಪ್ ಬಗ್ಗೆ ಸಮಗ್ರವಾಗಿ ಅಧ್ಯಕ್ಷ ಜೋ ಬೈಡನ್ ಜೊತೆ ಚರ್ಚಿಸುತ್ತೇನೆ. ಪರಸ್ಪರ ಆಸಕ್ತಿ ವಿಷಯಗಳ ಜೊತೆಗೆ ಗ್ಲೋಬಲ್ ಸಮಸ್ಯೆ ಮತ್ತು ಪ್ರಾದೇಶಿಕ ವಿಚಾರಗಳ ಬಗ್ಗೆ ವಿನಿಮಯ ಮಾಡಿಕೊಳ್ಳುವುದು. ಜೊತೆಗೆ ಯುಎಸ್ಎ ಉಪಾಧ್ಯಕ್ಷೆ ಕಮಲಾ ಹ್ಯಾರೀಸ್ ಅವರ ಭೇಟಿಯನ್ನೂ ಕೂಡ ಎದುರು ನೋಡುತ್ತಿದ್ದೇನೆ. ಹ್ಯಾರಿಸ್ ಜೊತೆ ಜಾಗತಿಕ ವಿಚಾರಗಳು ಮತ್ತು ಎರಡು ದೇಶಗಳ ಪರಸ್ಪರ ಸಹಕಾರದ ಬಗ್ಗೆ ಚರ್ಚೆಯಾಗಲಿದೆ. ಜೊತೆಗೆ ಅಧ್ಯಕ್ಷ ಜೋ ಬೈಡನ್ ನೇತೃತ್ವದಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಯಲ್ಲೂ ಭಾಗಿಯಾಗಲಿದ್ದೇನೆ. ಇದೇ ಮೊದಲ ಬಾರಿಗೆ ಕ್ವಾಡ್ ಲೀಡರ್ಗಳ ನೇತೃತ್ವದಲ್ಲಿ ನಡೆಯಲಿರುವ ಸಭೆಯಲ್ಲಿ ಭಾಗಿಯಾಗಲಿದ್ದೇನೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಆಸ್ಟ್ರೇಲಿಯಾ ಪ್ರಧಾನಿ ಮ್ಯಾರಿಸನ್ ಹಾಗೂ ಜಪಾನ್ ಪ್ರಧಾನಿ ಸುಗಾ ಅವರನ್ನು ಭೇಟಿ ಮಾಡಲಿದ್ದು, ಉಭಯ ನಾಯಕರೊಂದಿಗೆ ದ್ವಿಪಕ್ಷೀಯ ಸಂಬಂಧಗಳ ಕುರಿತು ಮಾತುಕತೆ ನಡೆಸಲಾಗುತ್ತಿದೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments