Webdunia - Bharat's app for daily news and videos

Install App

ಕೆಪಿಎಸ್‌ಸಿ ನೇಮಕಾತಿ: ಹೈಕೋರ್ಟ್ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ

Webdunia
ಶುಕ್ರವಾರ, 21 ನವೆಂಬರ್ 2014 (14:11 IST)
1998, 99, 2004ರ  ಕೆಪಿಎಸ್‌ಸಿ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಹೈಕೋರ್ಟ್ ವಿಚಾರಣೆಗೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ವಿಚಾರಣೆ ತಡೆ ಕೋರಿ ಅಭ್ಯರ್ಥಿಗಳು ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದರು. ಮುಖ್ಯನ್ಯಾಯಮೂರ್ತಿ ದತ್ತುಪೀಠ ಈ ಕುರಿತು ಅರ್ಜಿ ಪರಿಶೀಲನೆ ಮಾಡಿ ವಿಚಾರಣೆಗೆ ತಡೆನೀಡಿದೆ.  ಹೈಕೋರ್ಟ್‌ನಲ್ಲಿ ಅಂತಿಮ ವಿಚಾರಣೆ ನಡೆಯುತ್ತಿತ್ತು.

ಬಸವರಾಜ್, ಗೋಪಾಲಕೃಷ್ಣ ಮತ್ತಿತರರು ವಿಚಾರಣೆಗೆ ತಡೆ ಕೋರಿ ಅರ್ಜಿ ಸಲ್ಲಿಸಿದ್ದರು. 8 ವರ್ಷಗಳ ನಂತರ ಹುದ್ದೆಯಿಂದ ಅಧಿಕಾರಿಗಳನ್ನು ತೆಗೆಯುವುದು ಸರಿಯಲ್ಲ ಮತ್ತು ಅರ್ಜಿಯನ್ನು ಪಿಐಎಲ್ ಆಗಿ ಪರಿಗಣಿಸುವುದೂ ಸರಿಯಲ್ಲ.

ಹೀಗಾಗಿ ಹೈಕೋರ್ಟ್ ವಿಚಾರಣೆಗೆ ತಡೆಯಾಜ್ಞೆ ನೀಡಬೇಕು ಎಂದು ಕೆಎಎಸ್ ಅಧಿಕಾರಿಗಳ ಪರ ವಕೀಲ ಎಸ್. ಚಂದ್ರಶೇಖರ್ ವಾದ ಮಂಡಿಸಿದ್ದರು.

ನಾವು ಇಷ್ಟುವರ್ಷಗಳಿಂದ ಸರ್ಕಾರಿ ಸೇವೆ ಸಲ್ಲಿಸಿದ್ದು, ಈಗ ಏಕಾಏಕಿ ಹುದ್ದೆಯಿಂದ ತೆಗೆಯುವುದು ಸರಿಯಲ್ಲ ಎಂದು ಅಬ್ಯರ್ಥಿಗಳು ಅರ್ಜಿಯಲ್ಲಿ ತಿಳಿಸಿದ್ದರು. 
ಅಭ್ಯರ್ಥಿಗಳ ಪರ ವಾದವನ್ನು ಪರಿಗಣಿಸಿದ ಸುಪ್ರೀಂಕೋರ್ಟ್ ಹೈಕೋರ್ಟ್ ವಿಚಾರಣೆಗೆ ತಡೆಯಾಜ್ಞೆ ನೀಡಿತು. 
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments