ಮೋದಿ ಫೋಟೋಗಾಗಿ ಕೋರ್ಟ್ ಮೆಟ್ಟಿಲೇರಿದ ಈಶ್ವರಪ್ಪ

Krishnaveni K
ಶನಿವಾರ, 6 ಏಪ್ರಿಲ್ 2024 (11:48 IST)
ಶಿವಮೊಗ್ಗ: ಶಿವಮೊಗ್ಗದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಇದೀಗ ಮೋದಿ ಫೋಟೋ ಬಳಕೆ ವಿಚಾರವಾಗಿ ಕೋರ್ಟ್ ಮೊರೆ ಹೋಗಿದ್ದಾರೆ.

ತಮ್ಮ ಚುನಾವಣಾ ಪ್ರಚಾರದ ವೇಳೆ ಈಶ್ವರಪ್ಪ ಮೋದಿ ಭಾವಚಿತ್ರ ಬಳಸಿಕೊಳ್ಳುತ್ತಿದ್ದಾರೆ. ಇದನ್ನು ಬಿಜೆಪಿ ಅಧಿಕೃತ ಅಭ್ಯರ್ಥಿ ಬಿವೈ ವಿಜಯೇಂದ್ರ ವ್ಯಂಗ್ಯ ಮಾಡಿದ್ದರು. ಇದಕ್ಕೆ ತಿರುಗೇಟು ನೀಡಿದ ಈಶ್ವರಪ್ಪ ಮೋದಿ ಅವರ ಅಪ್ಪನ ಮನೆ ಆಸ್ತಿನಾ ಎಂದು ವ್ಯಂಗ್ಯ ಮಾಡಿದ್ದರು.

ಇದೀಗ ಮೋದಿ ಫೋಟೋ ಬಳಕೆಗಾಗಿ ಈಶ್ವರಪ್ಪ ಕೋರ್ಟ್ ಗೆ ಕೆವಿಯಟ್ ಅರ್ಜಿ ಸಲ್ಲಿಸಿದ್ದಾರೆ. ಈಶ್ವರಪ್ಪ ಮುನಿಸು ಏನಿದ್ದರೂ ರಾಜ್ಯ ಬಿಜೆಪಿ ನಾಯಕರ ಮೇಲೆ. ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ ಗೃಹ ಸಚಿವ ಅಮಿತ್ ಶಾ, ದೂರವಾಣಿ ಕರೆ ಮೂಲಕ ಈಶ್ವರಪ್ಪಗೆ ದೆಹಲಿಗೆ ಬರಲು ಸೂಚಿಸಿದ್ದರು. ಅದರಂತೆ ದೆಹಲಿಗೆ ಹೋಗಿದ್ದರೂ ಅಮಿತ್ ಶಾ ಭೇಟಿಗೆ ಸಿಕ್ಕಿರಲಿಲ್ಲ.

ಹೈಕಮಾಂಡ್ ಮೇಲೆ ಈಶ‍್ವರಪ್ಪಗೆ ಸಂಪೂರ್ಣ ಗೌರವವಿದೆ. ಇದೇ ಕಾರಣಕ್ಕೇ ಅವರು ಮೋದಿ ಫೋಟೋ ಬಳಸಿ ಚುನಾವಣಾ ಪ್ರಚಾರ ಮಾಡಲು ಹೊರಟಿದ್ದಾರೆ. ಇದು ಬಿಜೆಪಿ ಅಧಿಕೃತ ಅಭ್ಯರ್ಥಿ ಬಿವೈ ರಾಘವೇಂದ್ರ ಕೆಂಗಣ‍್ಣಿಗೆ ಗುರಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳನ್ನು ಟಾರ್ಗೆಟ್ ಮಾಡಲಾಗಿದೆ: ಡಿಸಿಎಂ ಪವನ್ ಕಲ್ಯಾಣ್

ರಾಜ್ಯದಲ್ಲಿರುವ ಡ್ರಗ್ಸ್‌ ದಂಧೆ ವಿರುದ್ಧ ಕಠಿಣ ಕ್ರಮ, ಪೆಡ್ಲರ್‌ಗಳಿಗೆ ನಡುಕ

ಮತ್ತಷ್ಟು ಹಣ ಕೊಡದಿದ್ದರೆ ಬೆತ್ತಲೆ ಫೋಟೋ ವೈರಲ್ ಬೆದರಿಕೆ, ಯುವಕ ಆತ್ಮಹತ್ಯೆ

ಮೋದಿ ಬಳಿಕ ಬಿಜೆಪಿಯಿಂದ ಪ್ರಧಾನಿ ಅಭ್ಯರ್ಥಿ ಯಾರು: ಕೊನೆಗೂ ತಿಳಿಸಿದ ಮೋಹನ್ ಭಾಗವತ್

ಸಿದ್ದರಾಮಯ್ಯ ಇರುವಷ್ಟು ದಿನ ಉತ್ತಮ ಹೆಜ್ಜೆ ಇಡಲಿ: ವಿಜಯೇಂದ್ರ

ಮುಂದಿನ ಸುದ್ದಿ
Show comments