Webdunia - Bharat's app for daily news and videos

Install App

ಶಕ್ತಿಯೋಜನೆಯ ನಷ್ಟ ತುಂಬಿಸಲು ಬಸ್ ದರ ಏರಿಕೆ

Krishnaveni K
ಭಾನುವಾರ, 14 ಜುಲೈ 2024 (11:27 IST)
ಬೆಂಗಳೂರು: ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಪ್ರಯಾಣ ಘೋಷಿಸಿದ್ದ ಕಾಂಗ್ರೆಸ್ ಗೆ ಈಗ ನಷ್ಟ ತುಂಬಿಸುವುದೇ ದೊಡ್ಡ ತಲೆನೋವಾಗಿದೆ. ಶಕ್ತಿಯೋಜನೆಯಿಂದ ಕೆಎಸ್ ಆರ್ ಟಿಸಿ ನಷ್ಟದಲ್ಲಿದ್ದು ಸದ್ಯದಲ್ಲೇ ಬಸ್ ದರ ಏರಿಕೆ ಮಾಡುವುದಾಗಿ ಕಾಂಗ್ರೆಸ್ ಶಾಸಕರೇ ಸುಳಿವು ನೀಡಿದ್ದಾರೆ.

ಸರ್ಕಾರ ಇತ್ತೀಚೆಗೆ ಪೆಟ್ರೋಲ್, ಡೀಸೆಲ್ ದರ ಏರಿಕೆ ಮಾಡಿತ್ತು. ಈ ವೇಳೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಬಸ್ ದರ ಏರಿಕೆ ಬಗ್ಗೆ ಸುಳಿವು ನೀಡಿದ್ದರು. ಆದರೆ ಅದಾದ ಬಳಿಕ ದರ ಏರಿಕೆ ಪ್ರಸ್ತಾಪ ತಣ್ಣಗಾಗಿತ್ತು. ಇದೀಗ ಸ್ವತಃ ವಾಯವ್ಯ ಕರ್ನಾಟಕ ಸಾರಿಗೆ ನಿಗಮದ ಅಧ್ಯಕ್ಷ ರಾಜು ಕಾಗೆ ದರ ಏರಿಕೆಯ ಸುಳಿವು ನೀಡಿದ್ದಾರೆ.

ಶಕ್ತಿ ಯೋಜನೆಯಿಂದಾಗಿ ಕೆಎಸ್ ಆರ್ ಟಿಸಿ ನಷ್ಟದಲ್ಲಿದೆ. ಬಸ್ ನ ಬಿಡಿ ಭಾಗಗಳ ದರವೂ ಏರಿಕೆಯಾಗಿದೆ. ಕಳೆದ 10 ವರ್ಷಗಳಿಂದ ಬಸ್ ದರ ಏರಿಕೆ ಮಾಡಿಲ್ಲ. ವಾಯವ್ಯ ಸಾರಿಗೆಗೆ ಸೇರಿದ ಹಳೆ ಕಟ್ಟಡಗಳನ್ನು ನವೀಕರಿಸಿ ಬಾಡಿಗೆಗೆ ನೀಡಲಾಗುತ್ತದೆ. ಇದೀಗ ಬಸ್ ದರ ಏರಿಕೆ ಅನಿವಾರ್ಯ ಎಂದಿದ್ದಾರೆ.

ಈಗಾಗಲೇ ಪೆಟ್ರೋಲ್, ಡೀಸೆಲ್ ದರ, ತರಕಾರಿ ದರ ಗಗನಕ್ಕೇರಿದೆ. ಹಾಲಿನ ದರವನ್ನೂ ಇತ್ತೀಚೆಗೆ ಏರಿಕೆ ಮಾಡಲಾಗಿತ್ತು. ಇದೀಗ ಬಸ್ ಪ್ರಯಾಣ ದರವನ್ನೂ ಏರಿಕೆ ಮಾಡಿದರೆ ಜನರಿಗೆ ಗಾಯದ ಮೇಲೆ ಬರೆ ಎಳೆದಂತಾಗಲಿದೆ. ಈಗಾಗಲೇ ಗ್ಯಾರಂಟಿ ಯೋಜನೆಯಿಂದ ಜನರ ಮೇಲಾಗುತ್ತಿರುವ ಹೊರೆ ಬಗ್ಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments