Select Your Language

Notifications

webdunia
webdunia
webdunia
webdunia

ತಮಿಳುನಾಡಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭ

ತಮಿಳುನಾಡಿಗೆ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಆರಂಭ
ಬೆಂಗಳೂರು , ಬುಧವಾರ, 7 ಡಿಸೆಂಬರ್ 2016 (09:22 IST)
ಜೆ. ಜಯಲಲಿತಾ ಅವರ ನಿಧನದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕರ್ನಾಟಕದಿಂದ ತಮಿಳುನಾಡಿಗೆ ಸ್ಥಗಿತಗೊಂಡಿದ್ದ ಕೆಎಸ್‌ಆರ್‌ಟಿಸಿ ಬಸ್ ಸಂಚಾರ ಇಂದು ಎಂದಿನಂತೆ ಆರಂಭಗೊಳ್ಳಲಿದೆ.
ತಮಿಳುನಾಡಿನಲ್ಲಿ ಎಲ್ಲವೂ ಸಹಜ ಸ್ಥಿತಿಗೆ ಮರಳುತ್ತಿದ್ದು, ಇಂದು 10 ಗಂಟೆಯಿಂದ ರಾಜ್ಯದಿಂದ ನೆರೆ ರಾಜ್ಯಕ್ಕೆ ಬಸ್ ಸಂಚಾರ ಆರಂಭವಾಗಲಿದೆ ಎಂಜು ಕೆಎಸ್‌ಆರ್‌ಟಿಸಿ ನಿರ್ದೇಶಕ  ರಾಜೇಂದ್ರ ಕುಮಾರ್ ಕಟಾರಿಯಾ ಹೇಳಿದ್ದಾರೆ.
 
ತಮಿಳುನಾಡಿನಿಂದ ಸಹ ಕರ್ನಾಟಕಕ್ಕೆ ಬಸ್ ಸಂಚಾರ ಆರಂಭವಾಗಿದೆ. 
 
ಇಂದು ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್‌ಗಳು ಅತ್ತಿಬೆಲೆವರೆಗೆ ತೆರಳಿ ಮರಳುತ್ತಿದ್ದವು. ಆದರೆ 10 ಗಂಟೆಯಿಂದ ರಾಜ್ಯದ ವಿವಿಧ ಜಿಲ್ಲೆಗಳಿಂದ ತಮಿಳುನಾಡಿಗೆ ಬಸ್ ಸಂಚಾರ ಎಂದಿನಂತೆ ಸುಗಮವಾಗಲಿವೆ. ಪ್ರತಿನಿತ್ಯ ಬೆಂಗಳೂರಿನಿಂದ ಸುಮಾರು 480 ಬಸ್‌ಗಳು ತಮಿಳುನಾಡಿಗೆ ಓಡಾಡುತ್ತವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಲೆನೊವೋ ಫ್ಯಾಬ್ 2 ಸ್ಮಾರ್ಟ್‌ಫೋನ್ ಬಿಡುಗಡೆ