Select Your Language

Notifications

webdunia
webdunia
webdunia
webdunia

ಕುಲ್ಗಾಮ್ ಜಿಲ್ಲೆಯಲ್ಲಿ ಎನ್‌ಕೌಂಟರ್: ಆರು ಭಯೋತ್ಪಾದಕರ ಹತ್ಯೆ, ಮುಂದುವರೆದ ಕಾರ್ಯಾಚರಣೆ

ಕುಲ್ಗಾಮ್ ಜಿಲ್ಲೆಯಲ್ಲಿ ಎನ್‌ಕೌಂಟರ್: ಆರು ಭಯೋತ್ಪಾದಕರ ಹತ್ಯೆ, ಮುಂದುವರೆದ ಕಾರ್ಯಾಚರಣೆ

Sampriya

ಶ್ರೀನಗರ , ಭಾನುವಾರ, 7 ಜುಲೈ 2024 (16:36 IST)
Photo Courtesy X
ಶ್ರೀನಗರ: ಕುಲ್ಗಾಮ್ ಜಿಲ್ಲೆಯ ಎರಡು ವಿಭಿನ್ನ ಸ್ಥಳಗಳಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ 6 ಮಂದಿ ಭಯೋತ್ಪದಕರು ಹತಾರಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್‌ಆರ್ ಸ್ವೈನ್ ಅವರು ಹೇಳಿದರು.

ಇಂದು ಈ ಬಗ್ಗೆ ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿಪಿ ಸ್ವೈನ್ ಅವರು,  ಕಾರ್ಯಾಚರಣೆಗಳು ವೇಗವನ್ನು ಪಡೆಯುತ್ತಿವೆ ಮತ್ತು ಭದ್ರತಾ ವಾತಾವರಣವನ್ನು ಬಲಪಡಿಸಲಾಗಿದೆ. ಇದು ನಿಸ್ಸಂದೇಹವಾಗಿ ಭದ್ರತಾ ಪಡೆಗಳಿಗೆ ಮಹತ್ವದ ಮೈಲಿಗಲ್ಲು. ಭದ್ರತಾ ವಾತಾವರಣವನ್ನು ಬಲಪಡಿಸುವಲ್ಲಿ ಈ ಯಶಸ್ಸುಗಳು ನಿರ್ಣಾಯಕವಾಗಿವೆ. ಜನರು ಭಯೋತ್ಪಾದನೆಯನ್ನು ಕೊನೆಗೊಳಿಸಲು ಒಗ್ಗೂಡುತ್ತಿದ್ದಾರೆ ಮತ್ತು ಕಾರ್ಯಾಚರಣೆಗಳು ವೇಗವನ್ನು ಪಡೆಯುತ್ತಿವೆ. ಪ್ರಸ್ತುತ ಕಾರ್ಯಾಚರಣೆಯು ಇನ್ನೂ ನಡೆಯುತ್ತಿದೆ ಮತ್ತು ಇನ್ನೂ ಮುಕ್ತಾಯಗೊಂಡಿಲ್ಲ ಎಂದರು.

ಈ ಕಾರ್ಯಾಚರಣೆಗಳಲ್ಲಿ ಸ್ಥಳೀಯ ಭಯೋತ್ಪಾದಕರು ಭಾಗಿಯಾಗಿರುವ ವರದಿಗಳನ್ನೂ ಅವರು ಉಲ್ಲೇಖಿಸಿದ್ದಾರೆ. ಸ್ಥಳೀಯ ಭಯೋತ್ಪಾದಕರ ಕೈವಾಡದ ಬಗ್ಗೆ ನಮಗೆ ಸುದ್ದಿ ಬಂದಿದೆ ಎಂದು ಅವರು ಹೇಳಿದರು.

ಮೊದಲ ಎನ್‌ಕೌಂಟರ್ ಶನಿವಾರ ಮೊಡೆರ್ಗಾಮ್ ಗ್ರಾಮದಲ್ಲಿ ಸಂಭವಿಸಿದೆ, ನಂತರ ಜಿಲ್ಲೆಯ ಫ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಮತ್ತೊಂದು ಎನ್‌ಕೌಂಟರ್ ಸಂಭವಿಸಿದೆ.

ದಕ್ಷಿಣ ಕಾಶ್ಮೀರದಲ್ಲಿ ನಡೆಯುತ್ತಿರುವ ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಈ ಭಯೋತ್ಪಾದಕ ದಾಳಿಗಳು ನಡೆದಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಡೆಂಗ್ಯೂ ನಿಯಂತ್ರಣಕ್ಕೆ ಮಾರ್ಗಸೂಚಿ ಪ್ರಕಟ: ಗೈಡ್​ಲೈನ್ಸ್ ಪಾಲಿಸದಿದ್ದರೆ ಬೀಳಲಿದೆ ಭಾರೀ ದಂಡ