Webdunia - Bharat's app for daily news and videos

Install App

ಕುಲ್ಗಾಮ್ ಜಿಲ್ಲೆಯಲ್ಲಿ ಎನ್‌ಕೌಂಟರ್: ಆರು ಭಯೋತ್ಪಾದಕರ ಹತ್ಯೆ, ಮುಂದುವರೆದ ಕಾರ್ಯಾಚರಣೆ

Sampriya
ಭಾನುವಾರ, 7 ಜುಲೈ 2024 (16:36 IST)
Photo Courtesy X
ಶ್ರೀನಗರ: ಕುಲ್ಗಾಮ್ ಜಿಲ್ಲೆಯ ಎರಡು ವಿಭಿನ್ನ ಸ್ಥಳಗಳಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ 6 ಮಂದಿ ಭಯೋತ್ಪದಕರು ಹತಾರಾಗಿದ್ದಾರೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಆರ್‌ಆರ್ ಸ್ವೈನ್ ಅವರು ಹೇಳಿದರು.

ಇಂದು ಈ ಬಗ್ಗೆ ಶ್ರೀನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಜಿಪಿ ಸ್ವೈನ್ ಅವರು,  ಕಾರ್ಯಾಚರಣೆಗಳು ವೇಗವನ್ನು ಪಡೆಯುತ್ತಿವೆ ಮತ್ತು ಭದ್ರತಾ ವಾತಾವರಣವನ್ನು ಬಲಪಡಿಸಲಾಗಿದೆ. ಇದು ನಿಸ್ಸಂದೇಹವಾಗಿ ಭದ್ರತಾ ಪಡೆಗಳಿಗೆ ಮಹತ್ವದ ಮೈಲಿಗಲ್ಲು. ಭದ್ರತಾ ವಾತಾವರಣವನ್ನು ಬಲಪಡಿಸುವಲ್ಲಿ ಈ ಯಶಸ್ಸುಗಳು ನಿರ್ಣಾಯಕವಾಗಿವೆ. ಜನರು ಭಯೋತ್ಪಾದನೆಯನ್ನು ಕೊನೆಗೊಳಿಸಲು ಒಗ್ಗೂಡುತ್ತಿದ್ದಾರೆ ಮತ್ತು ಕಾರ್ಯಾಚರಣೆಗಳು ವೇಗವನ್ನು ಪಡೆಯುತ್ತಿವೆ. ಪ್ರಸ್ತುತ ಕಾರ್ಯಾಚರಣೆಯು ಇನ್ನೂ ನಡೆಯುತ್ತಿದೆ ಮತ್ತು ಇನ್ನೂ ಮುಕ್ತಾಯಗೊಂಡಿಲ್ಲ ಎಂದರು.

ಈ ಕಾರ್ಯಾಚರಣೆಗಳಲ್ಲಿ ಸ್ಥಳೀಯ ಭಯೋತ್ಪಾದಕರು ಭಾಗಿಯಾಗಿರುವ ವರದಿಗಳನ್ನೂ ಅವರು ಉಲ್ಲೇಖಿಸಿದ್ದಾರೆ. ಸ್ಥಳೀಯ ಭಯೋತ್ಪಾದಕರ ಕೈವಾಡದ ಬಗ್ಗೆ ನಮಗೆ ಸುದ್ದಿ ಬಂದಿದೆ ಎಂದು ಅವರು ಹೇಳಿದರು.

ಮೊದಲ ಎನ್‌ಕೌಂಟರ್ ಶನಿವಾರ ಮೊಡೆರ್ಗಾಮ್ ಗ್ರಾಮದಲ್ಲಿ ಸಂಭವಿಸಿದೆ, ನಂತರ ಜಿಲ್ಲೆಯ ಫ್ರಿಸಲ್ ಚಿನ್ನಿಗಮ್ ಪ್ರದೇಶದಲ್ಲಿ ಮತ್ತೊಂದು ಎನ್‌ಕೌಂಟರ್ ಸಂಭವಿಸಿದೆ.

ದಕ್ಷಿಣ ಕಾಶ್ಮೀರದಲ್ಲಿ ನಡೆಯುತ್ತಿರುವ ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಈ ಭಯೋತ್ಪಾದಕ ದಾಳಿಗಳು ನಡೆದಿವೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಭಯೋತ್ಪಾದಕ ದಾಳಿಗಳು ಹೆಚ್ಚಾಗುತ್ತಿವೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

ಮುಂದಿನ ಸುದ್ದಿ
Show comments