Kumbhmela: ಕಳ್ಳತನ ಮಾಡಿ ಕುಂಭಮೇಳಕ್ಕೆ ಹೋಗಿ ಪಾಪ ಕಳೆಯಲು ಪ್ಲ್ಯಾನ್ ಮಾಡಿದ್ದ, ಕಳ್ಳನ ಸಂಚು ಫೇಲ್ ಆಗಿದ್ದು ಹೇಗೆ

Krishnaveni K
ಶುಕ್ರವಾರ, 24 ಜನವರಿ 2025 (09:38 IST)
ದೆಹಲಿ: ಕುಂಭಮೇಳಕ್ಕೆ ಹೋಗಿ ಪಾಪ ಕಳೆದು ಪುಣ್ಯ ಪ್ರಾಪ್ತಿಯಾಗಬೇಕು ಎಂದು ಎಷ್ಟೋ ಜನ ಗಂಗಾ ನದಿ ಸ್ನಾನ ಮಾಡುತ್ತಾರೆ. ಆದರೆ ಇಲ್ಲೊಬ್ಬ ಕುಂಭಮೇಳಕ್ಕೆ ಹೋಗಲೆಂದೇ ಕಳ್ಳತನಕ್ಕಿಳಿದು ಪೊಲೀಸರ ಅತಿಥಿಯಾಗಿದ್ದಾನೆ.

ದೆಹಲಿಯ ಅರವಿಂದ್ ಅಲಿಯಾಸ್ ಭೋಲಾ ಎಂಬಾತನಿಗೆ ಕುಂಭಮೇಳಕ್ಕೆ ಹೋಗಬೇಕೆಂಬ ಮಹದಾಸೆಯಿತ್ತು. ಆದರೆ ಮನೆ ತುಂಬಾ ಜನ, ಬಡತನವೂ ಇದ್ದಿದ್ದರಿಂದ ಪ್ರಯಾಗ್ ರಾಜ್ ಗೆ ಹೋಗಲು ಹಣ ಹೊಂದಿಸುವ ಪರಿಸ್ಥಿತಿಯಿರಲಿಲ್ಲ.

ಹೀಗಾಗಿ ಆತ ಕಂಡುಕೊಂಡಿದ್ದು ಕಳ್ಳತನದ ದಾರಿ. ದೆಹಲಿಯಲ್ಲಿ ಮೂರು ಮನೆಗಳಿಗೆ ಕನ್ನ ಹಾಕಿ ಬೆಲೆ ಬಾಳುವ ವಸ್ತುಗಳನ್ನು ದೋಚಿದ್ದ ಆತ ಹಣ ಹೊಂದಿಸಲು ಪ್ರಯತ್ನಿಸಿದ್ದ. ಆದರೆ ಅಷ್ಟರಲ್ಲೇ ಆತ ಪೊಲೀಸರ ಬಲೆಗೆ ಬಿದ್ದಿದ್ದಾನೆ.

ಕಳ್ಳತನ ಮಾಡಿ ಕೊನೆಗೆ ಕುಂಭಮೇಳಕ್ಕೆ ಹೋಗಿ ಪುಣ್ಯಸ್ನಾನ ಮಾಡಲು ಹೊರಟವನು ಈಗ ಕಂಬಿ ಎಣಿಸುವಂತಾಗಿದೆ. ಈತನ ಮೇಲೆ ಈಗಾಗಲೇ 16 ಸಣ್ಣ ಪುಟ್ಟ ಕೇಸ್ ಗಳಿತ್ತು ಎಂದು ಪೊಲೀಸರು ಹೇಳಿದ್ದಾರೆ. ಅಲ್ಲದೆ ಮಾದಕ ವಸ್ತುಗಳ ವ್ಯಸನಿಯಾಗಿದ್ದ ಎಂದೂ ಹೇಳಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಮುಖ ಘಟ್ಟದಲ್ಲಿರುವ ದೆಹಲಿ ಸ್ಫೋಟ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಶಬರಿಮಲೆಯಲ್ಲಿ ಭಕ್ತರಿಗೆ ತೊಂದರೆ, ಕೇರಳ ಸರ್ಕಾರಕ್ಕೆ ಕ್ಲಾಸ್ ತೆಗೆದುಕೊಂಡ ಅಣ್ಣಾಮಲೈ

ಜೆಡಿಎಸ್‌ನಲ್ಲಿಯೇ ಇರುತ್ತಿದ್ದರೆ ದೇವೇಗೌಡ, ಅವರ ಮಕ್ಕಳು ಸಿಎಂ ಆಗಕ್ಕೆ ಬಿಡ್ತಿರ್ಲಿಲ್ಲ: ಸಿದ್ದರಾಮಯ್ಯ

ದೆಹಲಿ ವಿಮಾನವೇರಿದ ಡಿಕೆಶಿ, ಶಾಸಕರನ್ನು ಇಲ್ಲೇ ಕಟ್ಟಿಹಾಕಲು ಸಿಎಂ ಮಾಸ್ಟರ್ ಪ್ಲಾನ್‌

ದೆಹಲಿ, ಶಿಕ್ಷಕರ ಇದೇ ನಡವಳಿಕೆಯಿಂದ ಮಗ ಪ್ರಾಣ ಕಳೆದುಕೊಂಡ

ಮುಂದಿನ ಸುದ್ದಿ