Webdunia - Bharat's app for daily news and videos

Install App

Kumbhmela: ಕಾಲ್ತುಳಿತದ ಬಳಿಕ ಮಹಾಕುಂಭಮೇಳದಲ್ಲಿ ಈ ಬದಲಾವಣೆ ಗಮನಿಸಿ

Krishnaveni K
ಗುರುವಾರ, 30 ಜನವರಿ 2025 (12:52 IST)
ಪ್ರಯಾಗ್ ರಾಜ್: ಕಾಲ್ತುಳಿತದ ಬಳಿಕ ಮಹಾಕುಂಭಮೇಳದಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಕುಂಭಮೇಳಕ್ಕೆ ಭೇಟಿ ನೀಡುವವರು ಈ ಬದಲಾವಣೆ ಗಮನಿಸಿ.

ನಿನ್ನೆ ಮೌನಿ ಅಮವಾಸ್ಯೆ ದಿನ ಕೋಟ್ಯಾಂತರ ಮಂದಿ ಕುಂಭಮೇಳಕ್ಕೆ ಬಂದು ಪುಣ್ಯಸ್ನಾನ ಮಾಡಿದ್ದರು. ಆದರೆ ಈ ವೇಳೆ ಕಾಲ್ತುಳಿತ ಸಂಭವಿಸಿ 30 ಭಕ್ತರು ಸಾವನ್ನಪ್ಪಿದ್ದರು. ಈ ಘಟನೆ ಬಳಿಕ ಉತ್ತರ ಪ್ರದೇಶ ಸರ್ಕಾರ ಕುಂಭಮೇಳದಲ್ಲಿ ಕೆಲವೊಂದು ನಿಯಮಗಳ ಬದಲಾವಣೆ ಮಾಡಿದೆ.

ಇದುವರೆಗೆ ಕುಂಭಮೇಳದಲ್ಲಿ ವಿವಿಐಪಿ ಪಾಸ್ ಗಳನ್ನು ನೀಡಲಾಗಿತ್ತು. ನಿನ್ನೆ ಕಾಲ್ತುಳಿತದ ಘಟನೆ ಬಳಿಕ ವಿವಿಐಪಿ ಪಾಸ್ ಬಗ್ಗೆ ಭಾರೀ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಇಂದಿನಿಂದ ವಿವಿಐಪಿ ಪಾಸ್ ಕಿತ್ತು ಹಾಕಲಾಗಿದೆ. ಯಾವುದೇ ವಿಶೇಷ ಪಾಸ್ ಮೂಲಕ ವಾಹನಗಳ ಪ್ರವೇಶವಿರಲ್ಲ. ಈ ಮೂಲಕ ಭಕ್ತರ ಸುಗಮ ಸಂಚಾರಕ್ಕೆ ಏಕಮುಖ ರಸ್ತೆ ವ್ಯವಸ್ಥೆ ಮಾಡಲಾಗಿದೆ.

ಪ್ರಯಾಗ್ ರಾಜ್ ನ ಗಡಿ ಭಾಗಗಳಲ್ಲೇ ನಾಲ್ಕು ಚಕ್ರದ  ವಾಹನಗಳನ್ನು ತಡೆಯಲಾಗುತ್ತಿದೆ. ನಗರದಲ್ಲಿ ನಾಲ್ಕು ಚಕ್ರಗಳ ವಾಹನಗಳ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಬೀದಿ ಬದಿ ವ್ಯಾಪಾರಿಗಳನ್ನು ರಸ್ತೆ ಬದಿಯಿಂದ ಖಾಲಿ ರಸ್ತೆಗೆ ಸ್ಥಳಾಂತರಿಸಲು ಸೂಚನೆ ನೀಡಲಾಗಿದೆ. ಜನರನ್ನು ಅನಗತ್ಯವಾಗಿ ನಿಲ್ಲಿಸಬಾರದು ಎಂದು ಸೂಚನೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments