ಕುಂಭಮೇಳಕ್ಕೆ ಇಂದು ಹೋಗುವವರು ಈ ವಿಚಾರ ಗಮನಿಸಿ

Krishnaveni K
ಸೋಮವಾರ, 3 ಫೆಬ್ರವರಿ 2025 (08:43 IST)
ಪ್ರಯಾಗ್ ರಾಜ್: ಮಹಾಕುಂಭಮೇಳಕ್ಕೆ ಇಂದು ಹೋಗುವವರು ಇಂದಿನ ಪರಿಸ್ಥಿತಿ ಬಗ್ಗೆ ತಿಳಿದುಕೊಳ್ಳುವುದು ಉತ್ತಮ. ಯಾಕೆಂದರೆ ಇಂದು ವಸಂತ ಪಂಚಮಿಯಾಗಿದ್ದು ಸಾಕಷ್ಟು ಜನರು ಸೇರುವ ನಿರೀಕ್ಷೆಯಿದೆ.

ಕಳೆದ ಬಾರಿ ಮೌನಿ ಅಮವಾಸ್ಯೆಯಂದು ವಿಪರೀತ ಜನ ದಟ್ಟಣೆಯಿಂದಾಗಿ ಕುಂಭಮೇಳದಲ್ಲಿ 30 ಭಕ್ತರು ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದರು. ಇದರಲ್ಲಿ ಕರ್ನಾಟಕದ ನಾಲ್ವರೂ ಸೇರಿದ್ದರು. ಇಂದು ವಸಂತ ಪಂಚಮಿ ನಿಮಿತ್ತ ಜನ ದಟ್ಟಣೆ ಕಂಡುಬರಲಿದೆ.

ವಸಂತ ಪಂಚಮಿ ನಿಮಿತ್ತ ಇಂದು ಶಾಹಿ ಸ್ನಾನ ನಡೆಯಲಿದ್ದು, ಸಾಕಷ್ಟು ಸಂಖ್ಯೆಯಲ್ಲಿ ಭಕ್ತರು ಪುಣ್ಯಸ್ನಾನಕ್ಕಾಗಿ ಬರಲಿದ್ದಾರೆ. ಈ ಸಂದರ್ಭದಲ್ಲಿ ನೂಕುನುಗ್ಗಲು ಸಹಜವಾಗಿದೆ. ಹೀಗಾಗಿ ಇಂದು ಕುಂಭಮೇಳಕ್ಕೆ ಬರುವ ಭಕ್ತರು ಇದನ್ನು ಗಮನದಲ್ಲಿಟ್ಟುಕೊಳ್ಳುವುದು ಉತ್ತಮ.

ಫೆಬ್ರವರಿ 26 ರವರೆಗೆ ಕುಂಭಮೇಳ ನಡೆಯಲಿದೆ. ಆದರೆ ವಿಶೇಷ ದಿನಗಳಂದು ಜನದಟ್ಟಣೆ ವಿಪರೀತವಾಗಿರುತ್ತದೆ. ಈ ಸಂದರ್ಭದಲ್ಲಿ ಮಕ್ಕಳು, ವಯೋವೃದ್ಧರು ಕುಂಭಮೇಳಕ್ಕೆ ಬರುವುದು ಅಷ್ಟು ಸುರಕ್ಷಿತವಲ್ಲ ಎನ್ನಬಹುದು. ಹೀಗಾಗಿ ಪರಿಸ್ಥಿತಿ ನೋಡಿಕೊಂಡು ಹೋದರೆ ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ಸಂಘಟನೆಗಳಿಗೆ ನಂದೇ ಪ್ರಾಯೋಜಕತ್ವ ಏನಿವಾಗ ಎಂದ ಪ್ರಿಯಾಂಕ್ ಖರ್ಗೆ: ಇಲ್ಲಿದ್ರೆ ಸಸ್ಪೆಂಡ್ ಇಲ್ವಾ ಎಂದ ನೆಟ್ಟಿಗರು

Video: ದೀಪಾವಳಿ ಬೋನಸ್ ಬದಲು ಸೋನ್ ಪಾಪ್ಡಿ ಕೊಟ್ಟ ಬಾಸ್: ನೌಕರರು ಮಾಡಿದ್ದೇನು

Video: ಇರುಮುಡಿ ಹೊತ್ತು ಶಬರಿಮಲೆ 18 ಮೆಟ್ಟಿಲು ಹತ್ತಿದ ರಾಷ್ಟ್ರಪತಿ ದ್ರೌಪದಿ ಮುರ್ಮು: ಹೊಸ ದಾಖಲೆ

ಆರ್ ಎಸ್ಎಸ್ ನಲ್ಲಿದ್ದ ಅಶೋಕ್ ರೈ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರಿದ್ದು ಯಾಕೆ: ಅವರೇ ಹೇಳಿದ್ದು ಹೀಗೆ

ಅಪ್ಪ ಅನಂತ್ ಕುಮಾರ್ ಸುದ್ದಿಗೆ ಬಂದಿದ್ದಕ್ಕೆ ಪ್ರಿಯಾಂಕ್ ಖರ್ಗೆಗೆ ಬೆಂಡೆತ್ತಿದ ಪುತ್ರಿ ಐಶ್ವರ್ಯಾ

ಮುಂದಿನ ಸುದ್ದಿ
Show comments