Webdunia - Bharat's app for daily news and videos

Install App

ಸಂಸತ್ತಿನಲ್ಲಿ ಸೂಕ್ತ ಚರ್ಚೆ ಕೊರತೆ: ಸಿಜೆಐ ರಮಣ

Webdunia
ಸೋಮವಾರ, 16 ಆಗಸ್ಟ್ 2021 (13:49 IST)
ನವದೆಹಲಿ(ಆ.16): ಸಂಸತ್ತಿನಲ್ಲಿ ಗುಣಮಟ್ಟದ ಚರ್ಚೆಗಳು ನಡೆಯದ ಕಾರಣ, ನೂತನ ಕಾನೂನುಗಳು ಅಸ್ಪಷ್ಟತೆ ಮತ್ತು ಗೊಂದಲಗಳಿಗೆ ಕಾರಣವಾಗುತ್ತಿರುವುದು ದುರದೃಷ್ಟಕರ ಎಂದು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮುರ್ತಿ ಎನ್.ವಿ. ರಮಣ ಅವರು ಬೇಸರ ವ್ಯಕ್ತಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ನ ಬಾರ್ ಅಸೋಸಿಯೇಶನ್, ನ್ಯಾಯಾಲಯದಲ್ಲಿ ಆಯೋಜಿಸಿದ್ದ 75ನೇ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ಧ್ವಜಾರೋಹಣ ಮಾಡಿ ಅವರು ಮಾತನಾಡಿದರು. ‘ಕಾನೂನುಗಳನ್ನು ರಚಿಸುವ ಸಮಯದಲ್ಲೇ ವಿಸ್ತೃತ ಚರ್ಚೆಗಳು ನಡೆದರೆ, ಕೋರ್ಟ್ಗಳು ಕಾನೂನುಗಳನ್ನು ಅರ್ಥೈಸಿಕೊಳ್ಳುವುದಕ್ಕೆ ಸುಲಭವಾಗುತ್ತದೆ. ದೇಶದ ಸ್ವಾತಂತ್ರ್ಯ ಹೋರಾಟವನ್ನು ವಕೀಲರು ಮುನ್ನಡೆಸಿದ್ದರು. ಮೊದಲ ಲೋಕಸಭಾ ಸದಸ್ಯರಲ್ಲಿ ಹೆಚ್ಚಿನವರು ವಕೀಲರು ಅಥವಾ ಕಾನೂನಿನ ಬಗ್ಗೆ ಅರಿವು ಇರುವವರಾಗಿದ್ದರು. ನೂತನ ಕಾನೂನು ಜನರ ಮೇಲೆ ಯಾವ ರೀತಿಯ ಪರಿಣಾಮ ಬೀರಲಿದೆ ಎನ್ನುವುದನ್ನು ವಿವರಿಸಿ ಹೇಳುತ್ತಿದ್ದರು.
ಇಂತಹ ಚರ್ಚೆಗಳು ನ್ಯಾಯಾಲಯ ಮೇಲಿನ ಹೊರೆಯನ್ನು ಕಡಿಮೆ ಮಾಡುತ್ತದೆ. ಆದರೆ, ಈಗ ನೂತನ ಕಾನೂನು ರಚನೆ ಪ್ರಕ್ರಿಯೆ ವೇಳೆ ಸಂಸತ್ತಿನಲ್ಲಿ ಸರಿಯಾದ ಚರ್ಚೆಗಳೇ ನಡೆಯುತ್ತಿಲ್ಲ. ಯಾವ ಉದ್ದೇಶಕ್ಕಾಗಿ ಕಾನೂನುಗಳನ್ನು ರಚಿಸಲಾಗಿದೆ ಎಂಬುದೇ ನಮಗೆ ಗೊತ್ತಾಗುವುದಿಲ್ಲ. ಇದರಿಂದ ನ್ಯಾಯಾಲಯಳಿಗೆ ಮತ್ತು ಜನರಿಗೆ ತೊಂದರೆ ಆಗುತ್ತಿದೆ ಎಂದು ಅವರು ಹೇಳಿದರು.
ಇತ್ತೀಚೆಗೆ ಕೊನೆಗೊಂಡ ಸಂಸತ್ತಿನ ಮುಂಗಾರು ಅಧಿವೇಶನ ಸಂಪೂರ್ಣ ಗದ್ದಲದಿಂದ ಕೂಡಿತ್ತು. ಗದ್ದಲದ ಮಧ್ಯೆಯೂ ಯಾವುದೇ ಚರ್ಚೆ ಇಲ್ಲದೇ ಹಲವು ಮಸೂದೆಗಳನ್ನು ಅಂಗೀಕರಿಸಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

11 years for Modi Govt: ಏನೂ ಮಾಡಿಲ್ಲ ಪ್ರಚಾರದಿಂದಲೇ ಬದುಕಿರೋದು ಎಂದ ಸಿದ್ದರಾಮಯ್ಯ

Indore Couple murder: ಮದುವೆ ಇಷ್ಟ ಇಲ್ಲ ಅಂದ್ರೆ ಆಗ್ಬೇಡಿ, ಮರ್ಡರ್ ಯಾಕೆ ಮಾಡ್ತೀರಿ

Gold price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Viral video: ಕಾಲ್ತುಳಿತವಾದಾಗ ಹೇಗೆ ನಮ್ಮನ್ನು ರಕ್ಷಿಸಿಕೊಳ್ಳಬೇಕು, ವೈರಲ್ ವಿಡಿಯೋ ನೋಡಿ

Chinnaswamy stampede: ಸೆಕ್ಯುರಿಟಿ ಕೊಡಕ್ಕಾಗಲ್ಲ, ಡಿಸಿಪಿ ಪತ್ರ ವೈರಲ್: ನಾನವನಲ್ಲ ಅಂತಿದ್ದ ಸರ್ಕಾರಕ್ಕೆ ಮುಜುಗರ

ಮುಂದಿನ ಸುದ್ದಿ
Show comments