Webdunia - Bharat's app for daily news and videos

Install App

ಭಾರತಕ್ಕೆ ಎಣ್ಣೆ ಆಮದು ಕೊರತೆ!

Webdunia
ಸೋಮವಾರ, 4 ಏಪ್ರಿಲ್ 2022 (15:16 IST)
ಮುಂಬೈ : ಮುಂದಿನ ಹಣಕಾಸು ವರ್ಷದಲ್ಲಿ ಭಾರತಕ್ಕೆ  ಸೂರ್ಯಕಾಂತಿ ಎಣ್ಣೆ ಆಮದಿನದಲ್ಲಿ ಶೇ.25ರಷ್ಟುಅಂದರೆ 4- 6 ಲಕ್ಷ ಟನ್ ಸೂರ್ಯಕಾಂತಿ ಎಣ್ಣೆಯ ಪೂರೈಕೆಯಲ್ಲಿ ಕೊರತೆಯುಂಟಾಗಲಿದೆ ಎಂದು ರೇಟಿಂಗ್ ಏಜೆನ್ಸಿ ಕ್ರಿಸಿಲ್ ಗುರುವಾರ ತಿಳಿಸಿದೆ.

ವಿಶ್ವದ ಅತ್ಯಂತ ದೊಡ್ಡ ಸೂರ್ಯಕಾಂತಿ ಎಣ್ಣೆ ಉತ್ಪಾದನಾ ದೇಶವಾದ ಉಕ್ರೇನ್ ಮೇಲೆ ರಷ್ಯಾ  ದಾಳಿ ನಡೆಸಿರುವ ಕಾರಣ ಈ ಪರಿಸ್ಥಿತಿ ಬಂದೊದಗಿದೆ.

ಭಾರತದಲ್ಲಿ ಪ್ರತಿ ವರ್ಷವು 230-240 ಲಕ್ಷ ಟನ್ ಖಾದ್ಯ ತೈಲ ಬಳಕೆಯಾಗುತ್ತಿದ್ದು, ಇದರಲ್ಲಿ ಸೂರ್ಯಕಾಂತಿ ತೈಲದ ಪಾಲು ಶೇ.10 ರಷ್ಟಿದೆ. ಶೇ.60 ರಷ್ಟುಸೂರ್ಯಕಾಂತಿ ಎಣ್ಣೆಯನ್ನು ವಿದೇಶಗಳಿಂದಲೇ ಆಮದು ಮಾಡಿಕೊಳ್ಳಲಾಗುತ್ತದೆ.

ಭಾರತಕ್ಕೆ ಶೇ.70 ರಷ್ಟುಕಚ್ಚಾ ಸೂರ್ಯಕಾಂತಿ ಎಣ್ಣೆಯು ಉಕ್ರೇನಿನಿಂದ (22-23 ಲಕ್ಷ ಟನ್) ಹಾಗೂ ಶೇ.20 ರಷ್ಟುರಷ್ಯಾದಿಂದ ಆಮದಾಗುತ್ತದೆ. ಉಳಿದ ಶೇ.10 ರಷ್ಟುಭಾಗ ಅಜೆಂರ್ಟೀನಾ ಇನ್ನಿತರ ದೇಶಗಳಿಂದ ಆಮದಾಗುತ್ತದೆ.

ಪ್ರಸ್ತುತ ಉಕ್ರೇನ್ ಯುದ್ಧ ಪೀಡಿತವಾಗಿದ್ದರೆ, ರಷ್ಯಾದ ಮೇಲೆ ವಿವಿಧ ರಾಷ್ಟ್ರಗಳು ಆರ್ಥಿಕ ನಿರ್ಬಂಧ ಹೇರಿವೆ. ಇದು ಭಾರತದ ದೇಶೀಯ ಖಾದ್ಯ ತೈಲ ಉತ್ಪಾದನಾ ಯೋಜನೆಯ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments