Webdunia - Bharat's app for daily news and videos

Install App

ಲಖಿಂಪುರಖೇರಿ ಹಿಂಸಾಚಾರ ಪ್ರಕರಣ: ಅ. 20ರಂದು ವಿಚಾರಣೆ

Webdunia
ಬುಧವಾರ, 20 ಅಕ್ಟೋಬರ್ 2021 (10:43 IST)
ಹೊಸದಿಲ್ಲಿ, ಅ. 20 : ರೈತರ ಪ್ರತಿಭಟನೆ ಸಂದರ್ಭ ನಾಲ್ವರು ರೈತರು ಸೇರಿದಂತೆ 8 ಮಂದಿ ಹತ್ಯೆಯಾದ ಅಕ್ಟೋಬರ್ 3ರಂದು ಲಖಿಂಪುರ ಖೇರಿಯಲ್ಲಿ ಸಂಭವಿಸಿದ ಹಿಂಸಾಚಾರ ಪ್ರಕರಣದ ವಿಚಾರಣೆಯನ್ನು ಬುಧವಾರ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ ಹೇಳಿದೆ.

8 ಮಂದಿಯನ್ನು ಬರ್ಬರವಾಗಿ ಹತ್ಯೆ ನಡೆಸಿದ ಕುರಿತಂತೆ ಉತ್ತರಪ್ರದೇಶ ಸರಕಾರ ತೆಗೆದುಕೊಂಡ ಕ್ರಮಗಳ ಬಗ್ಗೆ ಅಕ್ಟೋಬರ್ 8ರಂದು ಅಸಮಾಧಾನ ವ್ಯಕ್ತಪಡಿಸಿದ್ದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ಹಾಗೂ ನ್ಯಾಯಮೂರ್ತಿಗಳಾದ ಸೂರ್ಯಕಾಂತ್, ಹಿಮಾ ಕೊಹ್ಲಿ ಅವರನ್ನು ಒಳಗೊಂಡ ಪೀಠ ಪ್ರಕರಣದ ವಿಚಾರಣೆ ನಡೆಸಲಿದೆ.
ಲಖಿಂಪುರ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿ ಕೇಂದ್ರದ ಸಹಾಯಕ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಷ್ ಮಿಶ್ರಾ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ. ಘಟನೆ ಕುರಿತು ಸಿಬಿಐ ಸೇರಿದಂತೆ ಉನ್ನತ ಮಟ್ಟದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ಎರಡೂ ಕಡೆಯ ವಕೀಲರು ಮುಖ್ಯ ನ್ಯಾಯಮೂರ್ತಿ ಅವರಿಗೆ ಪತ್ರ ಬರೆದ ಬಳಿಕ ಸುಪ್ರೀಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price: ಅಡಿಕೆಗೆ ವಾರದ ಆರಂಭದಲ್ಲೇ ಇಳಿಕೆ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇಪ್ ಕೇಸ್: ಸಿಸಿಟಿವಿಯಲ್ಲಿ ದಾಖಲಾಗಿದೆ ಭಯಾನಕ ದೃಶ್ಯ

ಕಾಂಗ್ರೆಸ್ ಬಿಕ್ಕಟ್ಟಿಗೆ ಮದ್ದು ಹಚ್ಚಲು ಬೆಂಗಳೂರಿಗೆ ಸುರ್ಜೇವಾಲ

ಬೈಕ್ ನಲ್ಲಿ ಮಲಗಿ ಸ್ಟಂಟ್ ಮಾಡಲು ಹೋದ ಯುವಕರ ಕತೆ ಕೊನೆಗೆ ಏನಾಯ್ತು: ವಿಡಿಯೋ

ಮುಂದಿನ ಸುದ್ದಿ
Show comments