Webdunia - Bharat's app for daily news and videos

Install App

ಬಿಜೆಪಿಯನ್ನು ಮಟ್ಟ ಹಾಕಲು ಒಂದಾಗುತ್ತಿರುವ ಲಾಲು- ನಿತೀಶ್

Webdunia
ಸೋಮವಾರ, 21 ಜುಲೈ 2014 (16:28 IST)
ಮುಂಬರುವ ಆಗಸ್ಟ್‌ನಲ್ಲಿ ನಡೆಯಲಿರುವ ವಿಧಾನಸಭಾ ಉಪ ಚುನಾವಣೆಗೆ ಜತೆಯಾಗಿ ಕಣಕ್ಕಿಳಿಯಲಿದ್ದೇವೆ ಎಂದು ಒಂದು ಕಾಲಕ್ಕೆ ಪರಮ ವಿರೋಧಿಗಳಾಗಿದ್ದ ಆರ್‌ಜೆಡಿ ಮತ್ತು ಜೆಡಿಯು ಪಕ್ಷಗಳು ಘೋಷಿಸಿವೆ. ಕೆಲವು ಶಾಸಕರು ರಾಜೀನಾಮೆ ನೀಡಿರುವುದರಿಂದ ಮತ್ತು ಕೆಲವರು ಸಂಸದರಾಗಿ ಆಯ್ಕೆ ಯಾಗಿರುವುದರಿಂದ, ತೆರವಾಗಿರುವ 10 ವಿಧಾನಸಭಾ ಸ್ಥಾನಗಳಿಗೆ ಅಗಸ್ಟ್ 21 ರಂದು ಚುನಾವಣೆಗಳು ನಡೆಯುತ್ತಿವೆ. 

ಬಿಜೆಪಿಯನ್ನು ಸೋಲಿಸುವುದಕ್ಕಾಗಿ ನಾವು ಒಂದಾಗಿ ಚುನಾವಣೆಯನ್ನು ಎದುರಿಸುತ್ತಿದ್ದೇವೆ. ಎರಡು ಪಕ್ಷಗಳ ಹಿರಿಯ ನಾಯಕರು ಸಮಾಲೋಚಿಸಿ ಸೀಟುಗಳನ್ನು ಹಂಚಲಿದ್ದಾರೆ ಎಂದು ಜೆಡಿಯು ರಾಜ್ಯಾಧ್ಯಕ್ಷ ಬಸ್-ಹಿಸ್ತಾ ನಾರಾಯಣ್ ಸಿಂಗ್ ತಿಳಿಸಿದ್ದಾರೆ. 
 
ಬಿಜೆಪಿಯನ್ನು ಸೋಲಿಸುವ ಉದ್ದೇಶದಿಂದ ಸಮಾಜವಾದಿ ಮತ್ತು ಜಾತ್ಯತೀತ ಪಕ್ಷಗಳಾದ ಆರ್‌ಜೆಡಿ ಮತ್ತು ಜೆಡಿಯು ಪಕ್ಷಗಳು  ಒಂದಾಗಲಿವೆ ಎಂದು ಈ ಮೊದಲು ಬಿಹಾರದ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದರು. ಅಲ್ಲದೇ ತಮ್ಮನ್ನು ತಾವು ಶೇರ್ ಶಾಗೆ ಹೋಲಿಸಿಕೊಂಡಿರುವ ಬಿಹಾರದ ಮುಖ್ಯಮಂತ್ರಿ ಜಿತನ್ ರಾಮ್ ಮಂಜಿ ,ಶೇರ್ ಶಾನಂತೆ ತಾನು ಕೂಡ ಒಂದು ವರ್ಷದ ಅವಧಿಯಲ್ಲಿ ಅಂದುಕೊಂಡ ಫಲಿತಾಂಶವನ್ನು ಪಡೆಯುತ್ತೇನೆ ಎಂದಿದ್ದಾರೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments